ತೀರ್ಥಹಳ್ಳಿ: ಆರಿದ್ರಾ ಮಳೆ ಆರ್ಭಟಕ್ಕೆ ಹಲವೆಡೆ ಅನಾಹುತಗಳು ಸಂಭವಿಸಿದ್ದು ತಾಲೂಕಿನ ಕೆಲವೆಡೆ ಮನೆ, ಗೋಡೆ, ಜಾನುವಾರು ಕೊಟ್ಟಿಗೆಗಳಿಗೆ ಹಾನಿಯಾಗಿದೆ. ಸಾಲ್ಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟಗಾರು ಗ್ರಾಮದ ವಿಜಯ ವಿಠಲ ನಾಯಕ್ ಎಂಬುವರ ಮನೆ ಮೇಲೆ ಭಾರಿ ಗಾತ್ರದ ಮರ ಉರುಳಿ ಬಿದ್ದಿದ್ದು ಮನೆಗೆ ತೀವ್ರ ರೀತಿಯಲ್ಲಿ ಹಾನಿಯಾಗಿದೆ.
ಬಾಂಡ್ಯ ಕುಕ್ಕೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಟೆ ಜನಗಲ್ ಗ್ರಾಮದ ವೇದ ಎಂಬುವರ ಮನೆಯ ಕಡೆ ಕುಸಿದು ಬಿದ್ದಿದೆ. ಇನ್ನು ಶೇಡ್ಗಾರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಮ್ಮನಹಳ್ಳಿ ಗ್ರಾಮದ ಸರೋಜಾ ಎಂಬುವರಿಗೆ ಸೇರಿದ ಜಾನುವಾರು ಕೊಟ್ಟಿಗೆ ಕುಸಿದು ಬಿದ್ದಿದ್ದು ಕೊಟ್ಟಿಗೆ ಕುಸಿತದಿಂದ ಜಾನುವಾರುಗಳಿಗೂ ಪೆಟ್ಟಾಗಿದೆ ಎಂಬ ಮಾಹಿತಿ ಸಿಕ್ಕಿದೆ.
ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ತುಂಗಾ ನದಿಯ ನೀರಿನ ಮಟ್ಟವು ಕೂಡ ಏರಿಕೆಯಾಗುತ್ತಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…