Categories: Thirthahalli

ಮೇ 2 ರಂದು ತೀರ್ಥಹಳ್ಳಿಗೆ ರಾಹುಲ್ ಗಾಂಧಿ ; ಆರಗ ಗೆಲುವಿನ ಓಟಕ್ಕೆ ಬೀಳುತ್ತಾ ಬ್ರೇಕ್ !?

ತೀರ್ಥಹಳ್ಳಿ : ಗೃಹಸಚಿವ ಆರಗ ಜ್ಞಾನೇಂದ್ರ ಗೆಲುವಿನ ಓಟಕ್ಕೆ ತಡೆ ಒಡ್ಡುವ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್‌ಗೆ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ಮೇ 2 ರಂದು ತೀರ್ಥಹಳ್ಳಿಗೆ ಅಗಮಿಸಲಿರುವುದು ಕಾರ್ಯಕರ್ತರ ಸಂತೋಷಕ್ಕೆ ಕಾರಣವಾಗಿದೆ.

ಕಿಮ್ಮನೆ ರತ್ನಾಕರ ಕುರಿತು ವಿಶೇಷ ಆಸಕ್ತಿ ವಹಿಸಿರುವ ರಾಹುಲ್‌ ತಾವಾಗಿಯೇ ಪ್ರಚಾರಕ್ಕಾಗಿ ತೀರ್ಥಹಳ್ಳಿ ಕ್ಷೇತ್ರವನ್ನು ಆಯ್ದುಕೊಂಡಿರುವುದು ಮತ್ತು ಕನಿಷ್ಠ 3 ಗಂಟೆಗೂ ಹೆಚ್ಚಿನ ಕಾಲ ತೀರ್ಥಹಳ್ಳಿಯಲ್ಲಿ ಕಳೆಯಲಿರುವುದು ಪಕ್ಷದ ರಾಜ್ಯ ಮಟ್ಟದ ವ್ಯವಸ್ಥೆಯಲ್ಲೂ ಕಿಮ್ಮನೆ ರತ್ನಾಕರ್‌ ಅವರ ಮಿಸ್ಟರ್‌ ಕ್ಲೀನ್‌ ಇಮೇಜ್‌ಗೆ ಮತ್ತಷ್ಟು ಹೊಳಪು ನೀಡಿದೆ ಎಂದು ಅವರ ಅಭಿಮಾನಿಗಳು ಹೇಳುತ್ತಿದ್ದಾರೆ.

ಸದ್ಯ ನಿರಂತರವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರ ನಿರ್ಧಾರಗಳನ್ನು ಪ್ರಶ್ನಿಸುವ ಮೂಲಕ ಹಾಗೂ ಭಾರತ್‌ ಜೋಡೋ ಪಾದಯಾತ್ರೆಯ ಮೂಲಕ ರಾಷ್ಟ್ರಮಟ್ಟದ ಸೆನ್ಸೇಷನ್‌ ಆಗಿರುವ ರಾಹುಲ್‌ ಗಾಂಧಿ ಅವರ ಸಾರ್ವಜನಿಕ ಸಭೆಗಳು ಎಲ್ಲಾ ಕಡೆ ಭರ್ಜರಿ ಯಶಸ್ಸು ಕಾಣುತ್ತಿದೆ.

ತೀರ್ಥಹಳ್ಳಿಯಲ್ಲೂ ಗೃಹಸಚಿವ ಆರಗ ಜ್ಞಾನೇಂದ್ರ ಹಾಗೂ ಕಿಮ್ಮನೆ ರತ್ನಾಕರ್‌ ನಡುವೆ ಅತ್ಯಂತ ನಿಕಟ ಸ್ಪರ್ಧೆ ಏರ್ಪಟ್ಟಿದೆ. ತನ್ನ ಎಂದಿನ ತಳಮಟ್ಟದ ಕಾರ್ಯಕರ್ತರ ನೆಟ್‌ವರ್ಕ್‌, ಇದೇ ಕಡೆಯ ಚುನಾವಣೆ ಎಂಬ ಘೋಷಣೆ ಜೊತೆಗೆ ಗೃಹಮಂತ್ರಿಯಾಗಿ ಸೋಲಕೂಡದು ಎಂಬ ಛಲದೊಂದಿಗೆ ಆರಗ ಜ್ಞಾನೇಂದ್ರ ಒಂದು ಕ್ಷಣವೂ ವ್ಯರ್ಥ ಮಾಡದೆ ಪಕ್ಷದ ಕಾರ್ಯಕರ್ತರನ್ನು ನಾಚಿಸುವಂತೆ ಎಡಬಿಡದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಇತ್ತ ಕಿಮ್ಮನೆ ರತ್ನಾಕರ್‌ ಕೂಡ ಕಡೆಯ ಚುನಾವಣಾ ಸ್ಪರ್ಧೆ ಎಂದು ಮೊದಲೇ ಘೋಷಿಸಿದ್ದು ಹಿಂದೆಂದಿಗಿಂತಲೂ ಬಲಾಢ್ಯರಾಗಿರುವ ಆರಗ ಜ್ಞಾನೇಂದ್ರರೆದುರು ಪರಿಣಾಮಕಾರಿಯಾಗಿ ಪ್ರಚಾರ ತಂತ್ರ ರೂಪಿಸಲು ಶ್ರಮಿಸುತ್ತಿದ್ದಾರೆ. ಸದ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಹಿಯುಳ್ಳ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ಗ್ರಾಮೀಣ ಪ್ರದೇಶದ ಜನತೆ ಆಸಕ್ತಿಯಿಂದ ಗಮನಿಸುವಂತೆ ಮಾಡಿದೆ ಅಲ್ಲದೇ ಅವರನ್ನು ಸ್ಪರ್ಧೆ ವಿಚಾರದಲ್ಲಿ ಸರಿ ಸಮಾನ ಮಟ್ಟಕ್ಕೆ ತಂದು ನಿಲ್ಲಿಸಿದೆ.

ಈ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಆಗಮನ ವಿಶೇಷವಾಗಿ ಕಾಂಗ್ರೆಸ್‌ ಯುವ ಕಾರ್ಯಕರ್ತರಲ್ಲಿ ವಿದ್ಯುತ್‌ ಸಂಚಾರ ಮೂಡಿಸಿದ್ದು ಈ ತೀವ್ರ ಹಣಾಹಣಿಯಲ್ಲಿ ಕಿಮ್ಮನೆ ರತ್ನಾಕರ್‌ ಅವರಿಗೆ ಮುನ್ನಡೆ ದೊರಕಿಸಿಕೊಡಲು ಸಹಾಯಕವಾಗಲಿದೆ ಎಂಬ ಅಭಿಪ್ರಾಯಗಳು ಹರಿದಾಡುತ್ತಿದೆ.

ವರದಿ: ನಿರಂಜನ್

Malnad Times

Recent Posts

ಸೊರಬ ಮತಗಟ್ಟೆ ಸಂಖ್ಯೆ 159 ರಲ್ಲಿ ಕೈಕೊಟ್ಟ ಮತಯಂತ್ರ, ಸ್ಥಗಿತಗೊಂಡ ಮತದಾನ

ಸೊರಬ: ಪಟ್ಟಣದ ಚಿಕ್ಕಪೇಟೆಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ (ಪೂರ್ವ ಭಾಗ) ಮತಗಟ್ಟೆ ಸಂಖ್ಯೆ 159 ರಲ್ಲಿ ಸುಮಾರು…

2 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಬೆಳಗ್ಗೆ 9 ಗಂಟೆಯವರೆಗೆ ಶೇ. 11.39 ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು ?

ಶಿವಮೊಗ್ಗ : ಉತ್ತರ ಮತ್ತು ಮಧ್ಯ ಕರ್ನಾಟಕ ಕ್ಷೇತ್ರಗಳಲ್ಲಿ ಇಂದು 2ನೇ ಹಂತದ ಮತದಾನ ನಡೆಯುತ್ತಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ…

2 hours ago

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

5 hours ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

16 hours ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

17 hours ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

18 hours ago