ತೀರ್ಥಹಳ್ಳಿ : ತೀರ್ಥಹಳ್ಳಿ ಟೌನ್ ವಾಸದ ಮನೆಯೊಂದರಲ್ಲಿ ಮಹಿಳೆಯರನ್ನು ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಮೂವರು ಮಹಿಳೆಯರನ್ನು ರಕ್ಷಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ದಾಳಿ ನಡೆಸಿದ ಪೊಲೀಸರು ಕಮ್ಮರಡಿಯ ಜೆ.ಪಿ.ನಗರ ನಿವಾಸಿ ಪ್ರಶಾಂತ್.ಕೆ.ಎಸ್ (33) ಮತ್ತು ಮೇಲಿನ ಕುರುವಳ್ಳಿಯ ಮಂಜುನಾಥ.ಎಂ (37) ಎಂಬುವವರನ್ನು ಬಂಧಿಸಿದ್ದು, ಆರೋಪಿಗಳ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತಾರ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.
ತೀರ್ಥಹಳ್ಳಿ ಇನ್ಸ್ಪೆಕ್ಟರ್ ಅಶ್ವಥಗೌಡ, ಪಿಎಸ್ಐ ಸಾಗರ್ ಅತ್ತರವಾಲ, ಪಿಎಸ್ಐ ಗಾದಿಲಿಂಗಪ್ಪ ಗೌಡರ್, ಪೊಲೀಸ್ ಸಿಬ್ಬಂದಿ, ಮಹಿಳಾ ಸಾಂತ್ವನ ಕೇಂದ್ರದ ಕಿರಣ್ ಕುಮಾರಿ ದಾಳಿಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…