Categories: Thirthahalli

ಸಂಸತ್ ಭವನ ಉದ್ಘಾಟನೆಗೆ ಶೃಂಗೇರಿ, ತೀರ್ಥಹಳ್ಳಿ ವಿದ್ವಾಂಸರಿಂದ ಪೂಜೆ

ತೀರ್ಥಹಳ್ಳಿ : ದೆಹಲಿಯಲ್ಲಿ ಭಾನುವಾರ ಲೋಕಾರ್ಪಣೆಗೊಳ್ಳುತ್ತಿರುವ ನೂತನ ಸಂಸತ್ ಭವನಕ್ಕೂ ಶೃಂಗೇರಿ ಶಾರದಾ ಮಠಕ್ಕೂ ಅವಿನಾಭವ ಸಂಬಂಧವಿದೆ. ಉದ್ಘಾಟನೆಯ ಪೂಜಾ ಕಾರ್ಯಕ್ರಮಗಳಿಗೆ ಶೃಂಗೇರಿ ಪೀಠದಿಂದ ಪುರೋಹಿತರು ತೆರಳಿದ್ದರು, 2020ರಲ್ಲಿ ಇದೆ ಮಠದಿಂದ ವಿದ್ವಾಂಸರು ತೆರಳಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಭವನದ ಭೂಮಿಪೂಜೆಯನ್ನು ನೆರವೇರಿಸಿದ್ದರು.

ಕಾರ್ಯಕ್ರಮಗಳ ಕುರಿತು 2020ರಲ್ಲಿ‌ ಸಂಸತ್ ಭವನದ ಭೂಮಿಪೂಜೆ ನೆರವೇರಿಸಿದ ಶ್ರೀ ಶಿವಕುಮಾರ ಶರ್ಮಾ ಮಾಹಿತಿ ಹಚ್ಚಿಕೊಂಡಿದ್ದು, ಪ್ರಧಾನಿ ಮೋದಿ ಅವರ ಅಪೇಕ್ಷೆಯಂತೆ ಭಾರತೀರ್ಥ ಸ್ವಾಮೀಜಿ ಮಾರ್ಗದರ್ಶನದಲ್ಲಿ ಶೃಂಗೇರಿ ಮಠದಿಂದ ಡಾ.ಶಿವಕುಮಾರ ಶರ್ಮ, ಲಕ್ಷ್ಮೀನಾರಾಯಣ ಸೋಮಯಾಜಿ, ಶ್ರೀ ಗಣೇಶ ಸೋಮಯಾಜಿ ಹಾಗೂ ದೆಹಲಿಯ ಶೃಂಗೇರಿ ಶಾರದಾ ಪೀಠದ ಶಾಖಾ ಮಠದಿಂದ ನಾಗರಾಜ ಅಡಿಗ, ಋಷ್ಯಶೃಂಗ ಭಟ್ಟ, ದೆಹಲಿಯ ಶಾರದ ಮಠದಿಂದ ವಿದ್ವಾಂಸರು ತೆರಳಿದ್ದರು.

ಭೂಮಿ ಪೂಜೆ ಸಂದರ್ಭದಲ್ಲಿ ಪ್ರಧಾನಿಯವರೊಡನೆ ವಿಶೇಷ ಪೂಜೆ, ಹೋಮ, ಹವನ ನಡೆಸಲಾಗಿತ್ತು. ಶೃಂಗೇರಿ ಮಠದಿಂದ ಕೊಂಡೊಯ್ದ ಶಂಕು, ನವರತ್ನಗಳನ್ನು ಹಾಗೂ ಬೆಳ್ಳಿ ಇಟ್ಟಿಗೆಯನ್ನು ಅಂದು ಸ್ಥಾಪನೆ ಮಾಡಲಾಗಿತ್ತು. 2022 ರಲ್ಲಿ ಭವನದ ಮೇಲೆ ಲಾಂಛನದ ಉದ್ಘಾಟನೆಗೂ ಮಠದಿಂದ ವಿದ್ವಾಂಸರು ತೆರಳಿದ್ದರು.

ಈಗ ಲೋಕಾರ್ಪಣೆಗೆ ಕೂಡ ಶೃಂಗೇರಿ ಮಠದಿಂದ ಸೀತಾರಾಮ ಶರ್ಮ, ಶ್ರೀ ರಾಮ ಶರ್ಮ ಮತ್ತು ಲಕ್ಷ್ಮೀಶ ತಂತ್ರಿ ಹಾಗೂ ದೆಹಲಿ ಶಾಖಾ ಮಠದಿ೦ದ ನಾರಗಾಜ ಅಡಿಗ, ಋಷ್ಯಶೃಂಗ ಭಟ್ಟ ಇವರು‌ ಈಗಾಗಲೇ ತೆರಳಿದ್ದಾರೆ. ಉದ್ಘಾಟನೆಯ ಮುನ್ನಾ ದಿನ ಇವರಿಂದ ವಾಸ್ತು ಹೋಮ, ವಾಸ್ತು ಪೂಜೆಗಳು ನಡೆಯಲಿವೆ. ಭಾನುವಾರ ಮಹಾಗಣಪತಿ ಹೋಮ ನಡೆಯಲಿದೆ.

ಒಟ್ಟು 6 ಜನ ಸಂಸತ್ ಭವನದ ಶಿಲನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಹೆಮ್ಮೆಯ ವಿಷಯ. ಪ್ರಧಾನಿಯವರು ಶೃಂಗೇರಿ ಪೀಠದಿಂದ ವಿದ್ವಾಂಸರನ್ನು ಆಹ್ವಾನಿಸಿ ಪೂಜೆ ಮಾಡಿಸುತ್ತಿರುವುದು ಸಂತಸ ಮತ್ತು ಸರಿಯಾದ ಕ್ರಮ ಎನ್ನಿಸಿದೆ. ಈ ಭವ್ಯ ಭವನದಿಂದ ಭಾರತಕ್ಕೆ ಉತ್ತಮ ಭವಿಷ್ಯವಿದೆ ಎಂದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago