ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬುಕ್ಲಾಪುರ ಸಮೀಪದ ಹೊರಬೈಲಿನ ಶ್ಮಶಾನದಲ್ಲಿ ಸುಟ್ಟ ಶವದ ಬೂದಿಯನ್ನು ಹಾಗೂ ಸ್ಮಶಾನದಲ್ಲಿದ್ದ ಕಬ್ಬಿಣದ ರಾಡನ್ನು ಯಾರೋ ಕದ್ದೊಯ್ದ ವಿಚಿತ್ರ ಘಟನೆಯೊಂದು ಬುಧವಾರ ಬೆಳಕಿಗೆ ಬಂದಿದೆ.
ಪಟ್ಟಣದ ಸಮೀಪವಿರುವ ಹೊರಬೈಲಿನ ಗಂಗಾಧರೇಶ್ವರ ಸ್ಮಶಾನದಲ್ಲಿ 3 ದಿನದ ಹಿಂದೆ ಊರಿನ ಮಹಿಳೆಯೊಬ್ಬರ ಶವವನ್ನು ಸಂಸ್ಕಾರ ಮಾಡಲಾಗಿತ್ತು. ಮಾರನೇ ದಿನ ಕುಟುಂಬದವರು ಸ್ಮಶಾನದಲ್ಲಿ ಅಳಿದುಳಿದ ಕಟ್ಟಿಗೆ ಕೊಳ್ಳಿಯನ್ನು ದೂಡುವ ಪದ್ಧತಿಯಂತೆ ಕಟ್ಟಿಗೆಯನ್ನು ಮುಂದೆ ಹಾಕಿ ಒಂದು ಎಳನೀರು ಇಟ್ಟು ವಾಪಾಸು ಬಂದಿದ್ದರು. ಮೂರನೇ ದಿನವಾದ ಇಂದು ಸಂಸ್ಕಾರ ಮಾಡಿದ ಬೂದಿ ತೆಗೆಯಲು ಕುಟುಂಬಸ್ಥರು ಸ್ಮಶಾನಕ್ಕೆ ಬಂದಿದ್ದರು ಆದರೆ ಸ್ಮಶಾನದಲ್ಲಿ ನೋಡುವಾಗ ಸುಟ್ಟ ಶವದ ಬೂದಿ ಮಂಗ ಮಾಯವಾಗಿತ್ತು. ಆಶ್ಚರ್ಯವೆಂದರೆ ಬೂದಿ ಕದ್ದ ಕಳ್ಳರು ಮೂರು ಎಲುಬುಗಳನ್ನು ಅಲ್ಲೆ ಒಂದು ಬದಿಯಲ್ಲಿ ಇಟ್ಟಿದ್ದರು ಎನ್ನಲಾಗಿದೆ. ಕುಟುಂಬದವರು ಆ ಮೂರು ಮೂಳೆಗಳನ್ನು ತಂದು ಮುಂದಿನ ಕಾರ್ಯವನ್ನು ಮಾಡಿದ್ದಾರೆ.
ಸ್ಮಶಾನದಲ್ಲಿ ಸುಟ್ಟ ಶವದ ಬೂದಿ ಇಲ್ಲದ್ದನ್ನು ನೋಡಿ ಕಂಗಾಲಾದ ಕುಟುಂಬಸ್ಥರು ಆಶ್ಚರ್ಯಚಕಿತರಾಗಿ ಊರಿನ ಗ್ರಾಮಸ್ಥರಿಗೆ ಈ ವಿಷಯ ಮುಟ್ಟಿಸಿದ್ದಾರೆ. ಗ್ರಾಮಸ್ಥರು ಸ್ಮಶಾನಕ್ಕೆ ಹೋಗಿ ನೋಡಿದಾಗ ಕುಟುಂಬಸ್ಥರು ಹೇಳಿದ ವಿಷಯ ಸತ್ಯವಾಗಿತ್ತು. ಶವ ಸಂಸ್ಕಾರ ಮಾಡುವಾಗ ಅದರಲ್ಲಿ ಬಂಗಾರ, ಬೆಳ್ಳಿ ಹಾಗೂ ನಾಣ್ಯಗಳನ್ನು ಹಾಕಿರಬಹುದೆಂದು ಯೋಚಿಸಿ ಕಳ್ಳರು ಬೂದಿಯನ್ನು ತೆಗೆದುಕೊಂಡು ಹೋಗಿರಬಹುದು ಎಂದು ಊರಿನ ಸಾರ್ವಜನಿಕರಿಂದ ಮಾತುಗಳು ಕೇಳಿ ಬರುತ್ತಿದೆ.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…