Murder | ತಲೆ ಮೇಲೆ ಕಲ್ಲು ಎತ್ತಿ ಹಾಕಿ ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ಡಬಲ್ ಮರ್ಡರ್ !

0 127

ತೀರ್ಥಹಳ್ಳಿ : ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ಡಬಲ್ ಮರ್ಡರ್ ನಡೆದಿದೆ.

ತೀರ್ಥಹಳ್ಳಿಯ ಕುರುವಳ್ಳಿ ಸಮೀಪದ ವಿಶ್ವಕರ್ಮ ಸಮುದಾಯ ಭವನದ ಈ ಘಟನೆ ನಡೆದಿದೆ.

ಸಮುದಾಯ ಭವನ ನಿರ್ಮಾಣಕ್ಕೆ ಬಂದ ದಾವಣಗೆರೆ ಮೂಲದ ಕೂಲಿ ಕಾರ್ಮಿಕರಾದ ಮಂಜಪ್ಪ (45) ಮತ್ತು ಬೀರಪ್ಪ (46) ಹತ್ಯೆಗೀಡಾದ ವ್ಯಕ್ತಿಗಳಾಗಿದ್ದಾರೆ.

ಕುಡಿದ ಅಮಲಿನಲ್ಲಿ ಹತ್ಯೆ ಮಾಡಿರುವ ಅನುಮಾನವಿದ್ದು ಹಣದ ವ್ಯವಹಾರದಲ್ಲಿ ಕೊಲೆ ನಡೆದಿರುವ ಶಂಕೆ ಸಹ ಪೊಲೀಸರು ವ್ಯಕ್ತಪಡಿಸುತ್ತಿದ್ದಾರೆ‌.

ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು ಇದೇ ತಿಂಗಳ 25 ರಂದು ಉದ್ಘಾಟನೆಗೊಳ್ಳಬೇಕಿದ್ದ ವಿಶ್ವಕರ್ಮ ಸಮುದಾಯ ಭವನದಲ್ಲಿ ಈ ಘಟನೆ ನಡೆದಿದೆ.

ರಾಜಪ್ಪ ಎನ್ನುವ ವ್ಯಕ್ತಿಯಿಂದ ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ ವ್ಯಕ್ತವಾಗಿದ್ದು ಘಟನಾ ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಮತ್ತು ಶಿವಮೊಗ್ಗ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave A Reply

Your email address will not be published.

error: Content is protected !!