ಶಿಕಾರಿಪುರ/ತೀರ್ಥಹಳ್ಳಿ : ಇಬ್ಬರು ವ್ಯಕ್ತಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಎರಡು ಪ್ರತ್ಯೇಕ ಘಟನೆ ವರದಿಯಾಗಿದೆ.
ಶಿಕಾರಿಪುರ ತಾಲ್ಲೂಕಿನ ಮಾಸೂರಿನ ಯುವಕನೋರ್ವ ಮದುವೆ ನಿಶ್ಚಿತಾರ್ಥ ಮುರಿದು ಬಿದ್ದ ಹಿನ್ನೆಲೆಯಲ್ಲಿ ಬೇಸರಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಒಂದು ವರ್ಷದ ಹಿಂದೆ ಶಿಕಾರಿಪುರ ತಾಲೂಕಿನ ಯುವತಿಯೊಂದಿಗೆ ನಿಶ್ವಿತಾರ್ಥವಾಗಿತ್ತು. ಯುವತಿಯ ತಂದೆ ಮದುವೆಗೆ ನಿರಾಕರಿಸಿದ ಕಾರಣ ಮುರಿದು ಬಿದ್ದಿತ್ತು. ಅಣ್ಣಪ್ಪ ಮೇ 10 ರಂದು ವಿಷ ಸೇವಿಸಿದ್ದನು. ಇಂದು ಬೆಳಿಗ್ಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಮತ್ತೊಂದು ಘಟನೆ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದ್ದು ಕೋಳಿ ಫಾರಂನಲ್ಲಿ ಕೆಲಸ ಮಾಡಿಕೊಂಡಿದ್ದ ಆದರ್ಶ ಎಂಬ ಯುವಕ ವಿಷ ಸೇವಿಸಿ ಸಾವು ಕಂಡಿದ್ದಾನೆ.
ಹುಂಚ ಸಮೀಪದ ಬನಶೆಟ್ಟಿಕೊಪ್ಪದ ಆದರ್ಶ (26) ಮೂರು ದಿನಗಳ ಹಿಂದೆ ವಿಷ ಸೇವಿಸಿದ್ದ. ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾನೆ. ಈತ ಕೋಣಂದೂರು ಬಳಿ ಕೋಳಿಫಾರಂಗೆ ಕೆಲಸಕ್ಕೆ ಹೋಗುತ್ತಿದ್ದನು ಎನ್ನಲಾಗಿದೆ.
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…
ರಿಪ್ಪನ್ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…
ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…
ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…