ಶಿವಮೊಗ್ಗ: ನಗರದ ವಿನೋಬನಗರ ಸಮುದಾಯ ಭವನದಲ್ಲಿ ಬುಧವಾರ ನಡೆದ ಸಾಮೂಹಿಕ ವಿವಾಹದಲ್ಲಿ ಅಪ್ರಾಪ್ತರ ಮದುವೆ ನಡೆಯುತ್ತಿರುವ ಮಾಹಿತಿ ಮೇರೆಗೆ, ತಹಶಿಲ್ದಾರ್ ರಾಜೀವ್ ಅವರ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಎರಡು ಜೋಡಿಗಳ ಮದುವೆಯನ್ನು ತಡೆಗಟ್ಟಿದೆ.
ಭಾರತೀಯ ದಲಿತ ಸಂಘರ್ಷ ಸಮಿತಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಒಟ್ಟು 8 ಜೋಡಿಗಳ ಮದುವೆ ನಡೆಯಬೇಕಿತ್ತು. ದಾಖಲೆ ಪರಿಶೀಲನೆ ವೇಳೆ ಎರಡು ಜೋಡಿಗಳು ಅಪ್ರಾಪ್ತರು ಎಂದು ದೃಢಪಟ್ಟಿದ್ದು, ಆರು ಜೋಡಿಗಳ ಮದುವೆಗೆ ಮಾತ್ರ ಅವಕಾಶ ನೀಡಲಾಗಿದೆ. ಅಪ್ರಾಪ್ತರನ್ನು ಮಕ್ಕಳ ಸಹಾಯವಾಣಿ ಸಿಬ್ಬಂದಿ ಕಾನೂನು ಪ್ರಕಾರ ಮಕ್ಕಳ ಮತ್ತು ಮಹಿಳಾ ಇಲಾಖೆಯ ವಶಕ್ಕೆ ಒಪ್ಪಿಸಿದೆ. ಕುಟುಂಬಗಳಿಗೆ ಜಾಗೃತಿ ಮೂಡಿಸಲಾಗಿದೆ.
ರಾಜ್ಯ ಸರ್ಕಾರ ಬಾಲ್ಯ ವಿವಾಹಕ್ಕೆ ಕಡಿವಾಣ ಹಾಕಲು ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ), 2025 ಕರಡು ಮಸೂದೆ ಸಿದ್ಧಪಡಿಸಿದೆ. ಹೊಸ ಪ್ರಸ್ತಾಪಿತ ಕಾನೂನಿನಲ್ಲಿ ಮದುವೆ ನೆರವೇರಿಸುವುದಷ್ಟೇ ಅಲ್ಲ, ಬಾಲ್ಯ ವಿವಾಹಕ್ಕೆ ಸಿದ್ಧತೆ, ನಿಶ್ಚಿತಾರ್ಥ ಮತ್ತು ಸಹಭಾಗಿತ್ವ ಕೂಡ ಶಿಕ್ಷಾರ್ಹವಾಗಲಿದೆ. ದೋಷಿಗಳಾಗುವವರಿಗೆ ಗರಿಷ್ಠ 2 ವರ್ಷ ಜೈಲು ಅಥವಾ ₹1 ಲಕ್ಷ ದಂಡ ಅಥವಾ ಎರಡೂ ವಿಧಿಸಲಾಗಬಹುದು.
ಬಾಲ್ಯ ವಿವಾಹ ನಿಷೇಧದಲ್ಲಿ ರಾಜ್ಯ ಸರ್ಕಾರದ ಈ ತಿದ್ದುಪಡಿ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳಿಗೆ ತೀವ್ರ ತಡೆ ಒದಗಿಸಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.