ಶಿವಮೊಗ್ಗ ; ಫೆ. 26 ಮತ್ತು 27 ರಂದು ಶಿವಮೊಗ್ಗ ನಗರದ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮತ್ತ ಜಾತ್ರೆ ನಡೆಯಲಿದ್ದು, ಫೆ. 26ರ ಬೆಳಗಿನಜಾವ 4 ರಿಂದ 27ರ ಬೆಳಗಿನಜಾವದವರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬಂದು ಹೋಗುವ ಕಾರಣ ಹಾಗೂ ಸೂಳೆಬೈಲು ಬೆಟ್ಟದ ಮಲ್ಲೇಶ್ವರ ದೇವಾಲಯಕ್ಕೂ ಭಕ್ತಾದಿಗಳು ಆಗಮಿಸುವುದರಿಂದ ಈ ಕೆಳಗಿನಂತೆ ತಾತ್ಕಾಲಿಕವಾಗಿ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಸೂಚನೆ ಹೊರಡಿಸಿ ಆದೇಶ ನೀಡಿದ್ದಾರೆ.

ಶಿವಮೊಗ್ಗದಿಂದ ತೀರ್ಥಹಳ್ಳಿ ಮಾರ್ಗವಾಗಿ ಓಡಾಡುವ ವಾಹನಗಳನ್ನು ಗಜಾನನ ಗ್ಯಾರೇಜ್ ಪಕ್ಕದ ರಸ್ತೆಯಲ್ಲಿ ಹೋಗಿ ರಾಮಿನಕೊಪ್ಪ ಚಾನಲ್ ಮಾರ್ಗವಾಗಿ ಎನ್.ಹೆಚ್. ಆಸ್ಪತ್ರೆ ಪಕ್ಕದ ರಸ್ತೆಗೆ ಬಂದು ಸೇರುವುದು.
ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುವ ಎಲ್ಲಾ ವಾಹನಗಳು ಎನ್. ಹೆಚ್. ರಸ್ತೆಯ ಪಕ್ಕದ ರಸ್ತೆಯ ಮೂಲಕ ರಾಮಿನಕೊಪ್ಪ ಚಾನಲ್ ಕ್ರಾಸ್ ನಿಂದ ಗಜಾನನ ಗ್ಯಾರೇಜ್ ಮೂಲಕ ಬಂದು ಶಿವಮೊಗ್ಗ ಸೇರುವುದು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?
SagaraMay 31, 2025ಪತ್ರಕರ್ತನ ಮೇಲೆ ಹಲ್ಲೆ ಯತ್ನ, ಜೀವ ಬೆದರಿಕೆ ; ಕ್ರಮಕ್ಕೆ ಒತ್ತಾಯ