ರಿಪ್ಪನ್ಪೇಟೆ ; ಕುವೆಂಪು ವಿಶ್ವವಿದ್ಯಾಲಯದ ಶಿಕ್ಷಣ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಶೋಭಾ ಬಿ.ಎಸ್. ಕೋಂ ರಾಜೇಂದ್ರ ಜಿ.ಪಿ. ಗಿಳಾಲಗುಂಡಿ ಅವರಿಗೆ ವಿಶ್ವವಿದ್ಯಾಲಯದ 35ನೇ ಘಟಿಕೋತ್ಸವದಲ್ಲಿ ಪ್ರಥಮ ರ್ಯಾಂಕ್ನೊಂದಿಗೆ ಎರಡು ಚಿನ್ನದ ಪದಕ ನೀಡಿ ಗೌರವಿಸಿದೆ.
ಶೋಭಾ ಬಿ.ಎಸ್. ಪ್ರಸ್ತುತ ಮುರುಘಾಮಠ ಎಸ್.ಜೆ.ಜಿ.ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಇವರ ಈ ಸಾಧನೆಗೆ ಆನಂದಪುರ ಮುರುಘಾಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀಜಿ ಮತ್ತು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಅಭಿನಂದಿಸಿ ಶುಭಾಶೀರ್ವಾದ ನೀಡಿದ್ದಾರೆ.

