ರಿಪ್ಪನ್ಪೇಟೆ ; ಶ್ರಾವಣ ಮಾಸದ ಅಂಗವಾಗಿ ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜಿಯವರು ಭಕ್ತರ ಮನೆಮನದಲ್ಲಿ ವೀರಶೈವ ಪವಿತ್ರ ಧರ್ಮಗ್ರಂಥ ಸಿದ್ದಾಂತ ಶಿಖಾಮಣಿ ಆಧ್ಯಾತ್ಮ ಪ್ರವಚನ ಹಾಗೂ ಶಿವಪೂಜಾನುಷ್ಟಾನ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಯುವ ಜನಾಂಗ ಧರ್ಮ ಧಾರ್ಮಿಕ ಆಚರಣೆಗಳಿಂದ ವಿಮುಖರಾಗುತ್ತಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿ, ಮುಂದಿನ ಪೀಳಿಗಗೆ ನಮ್ಮ ಧರ್ಮ ಸಂಸ್ಕೃತಿ ಸಂಸ್ಕಾರದ ಕುರಿತು ಜಾಗೃತಗೊಳಿಸುವ ಮಹತ್ವಾಕಾಂಕ್ಷಿಯಿಂದಾಗಿ ಒಂದು ತಿಂಗಳ ಕಾಲ ಭಕ್ತರು ಬಂದು ತಮ್ಮ ಮನೆಗಳಲ್ಲಿ ಪೂಜಾ ಕಾರ್ಯಕ್ಕೆ ಆಹ್ವಾನಿಸಿದರೆ ಆವರ ಮನೆಗೆ ತೆರಳಿ ವೀರಶೈವ ಧರ್ಮದ ಪವಿತ್ರ ಗ್ರಂಥವಾದ ಸಿದ್ದಾಂತ ಶಿಖಾಮಣಿ ಮತ್ತು ಆಧ್ಯಾತ್ಮ ಧರ್ಮ ಪ್ರವಚನ ಮತ್ತು ಶಿವಪೂಜಾನುಷ್ಟಾನ ವಿಶೇಷ ಪೂಜಾ ಕೈಂಕರ್ಯವನ್ನು ನಡೆಸಲಾಗುವುದಾಗಿ ಮಾಧ್ಯಮದವರಿಗೆ ವಿವರಿಸಿದರು.
ಶ್ರಾವಣ ಮಾಸದ ಅಂಗವಾಗಿ ಶ್ರೀ ಮಠದಲ್ಲಿ ಲಿಂ.ಶ್ರೀಗಳವರ ಕರ್ತೃಗದ್ದುಗೆಯಲ್ಲಿ ಮುಂಜಾನೆ ರುದ್ರಾಭಿಷೇಕ ಶಿವಪೂಜೆ ಇನ್ನಿತರ ಪೂಜಾ ಕಾರ್ಯಗಳೊಂದಿಗೆ ಪ್ರವಚನ ಸಹ ನಡೆಸಲಾಗುವುದೆಂದು ತಿಳಿಸಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದರ್ಶನಾಶೀರ್ವಾದ ಪಡೆಯಲು ಕೋರಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.