ರಿಪ್ಪನ್ಪೇಟೆ ; ಶ್ರಾವಣ ಮಾಸದ ಅಂಗವಾಗಿ ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜಿಯವರು ಭಕ್ತರ ಮನೆಮನದಲ್ಲಿ ವೀರಶೈವ ಪವಿತ್ರ ಧರ್ಮಗ್ರಂಥ ಸಿದ್ದಾಂತ ಶಿಖಾಮಣಿ ಆಧ್ಯಾತ್ಮ ಪ್ರವಚನ ಹಾಗೂ ಶಿವಪೂಜಾನುಷ್ಟಾನ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಯುವ ಜನಾಂಗ ಧರ್ಮ ಧಾರ್ಮಿಕ ಆಚರಣೆಗಳಿಂದ ವಿಮುಖರಾಗುತ್ತಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿ, ಮುಂದಿನ ಪೀಳಿಗಗೆ ನಮ್ಮ ಧರ್ಮ ಸಂಸ್ಕೃತಿ ಸಂಸ್ಕಾರದ ಕುರಿತು ಜಾಗೃತಗೊಳಿಸುವ ಮಹತ್ವಾಕಾಂಕ್ಷಿಯಿಂದಾಗಿ ಒಂದು ತಿಂಗಳ ಕಾಲ ಭಕ್ತರು ಬಂದು ತಮ್ಮ ಮನೆಗಳಲ್ಲಿ ಪೂಜಾ ಕಾರ್ಯಕ್ಕೆ ಆಹ್ವಾನಿಸಿದರೆ ಆವರ ಮನೆಗೆ ತೆರಳಿ ವೀರಶೈವ ಧರ್ಮದ ಪವಿತ್ರ ಗ್ರಂಥವಾದ ಸಿದ್ದಾಂತ ಶಿಖಾಮಣಿ ಮತ್ತು ಆಧ್ಯಾತ್ಮ ಧರ್ಮ ಪ್ರವಚನ ಮತ್ತು ಶಿವಪೂಜಾನುಷ್ಟಾನ ವಿಶೇಷ ಪೂಜಾ ಕೈಂಕರ್ಯವನ್ನು ನಡೆಸಲಾಗುವುದಾಗಿ ಮಾಧ್ಯಮದವರಿಗೆ ವಿವರಿಸಿದರು.
ಶ್ರಾವಣ ಮಾಸದ ಅಂಗವಾಗಿ ಶ್ರೀ ಮಠದಲ್ಲಿ ಲಿಂ.ಶ್ರೀಗಳವರ ಕರ್ತೃಗದ್ದುಗೆಯಲ್ಲಿ ಮುಂಜಾನೆ ರುದ್ರಾಭಿಷೇಕ ಶಿವಪೂಜೆ ಇನ್ನಿತರ ಪೂಜಾ ಕಾರ್ಯಗಳೊಂದಿಗೆ ಪ್ರವಚನ ಸಹ ನಡೆಸಲಾಗುವುದೆಂದು ತಿಳಿಸಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದರ್ಶನಾಶೀರ್ವಾದ ಪಡೆಯಲು ಕೋರಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.