ಸತತ 4ನೇ ಬಾರಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಶ್ರೇಯಾ

Written by Mahesha Hindlemane

Updated on:

ರಿಪ್ಪನ್‌ಪೇಟೆ ; ಇಲ್ಲಿನ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿ ಶ್ರೇಯಾ ಬಿ.ಆರ್ ಕಬಡ್ಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಬೆಂಗಳೂರು ಉತ್ತರ ವಲಯದ ರಾಜಾಜಿನಗರದಲ್ಲಿ ನಡೆದ 17 ವರ್ಷ ವಯೋಮಿತಿಯೊಳಗಿನ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಮಹಾರಾಷ್ಟ್ರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕಬಡ್ಡಿಗೆ ಆಯ್ಕೆಯಾಗಿ ಕರ್ನಾಟಕ ತಂಡವನ್ನು 4ನೇ ಬಾರಿ ಪ್ರತಿನಿಧಿಸಲಿದ್ದಾರೆ.

ಪಟ್ಟಣದ ಶಬರೀಶ ನಗರದ ನಿವಾಸಿಗಳಾದ ರಾಘವೇಂದ್ರ ಬಿ.ಎಸ್ ಮತ್ತು ಸವಿತಾ ದಂಪತಿಯ ಪುತ್ರಿಯಾದ ಶ್ರೇಯಾ, ರಾಮಕೃಷ್ಣ ವಿದ್ಯಾಲಯದಲ್ಲಿ 10ನೇ ತರಗತಿಯ ವ್ಯಾಸಂಗ ಮಾಡುತ್ತಿದ್ದಾರೆ.

ಅಪ್ರತಿಮ ಸಾಧನೆಯ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವ ಈ ಯುವ ಪ್ರತಿಭೆಗೆ ಶ್ರೀ ರಾಮಕೃಷ್ಣ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ದೈಹಿಕ ಶಿಕ್ಷಕ ವಿನಯ್ ಎಂ ಹಾಗೂ ಸಾರ್ವಜನಿಕರು ಆಭಿನಂದಿಸಿ ಶುಭ ಹಾರೈಸಿದ್ದಾರೆ.

Leave a Comment