ವಿಶ್ವ ಶಾಂತಿ, ಭ್ರಾತೃತ್ವ ಧರ್ಮಸಂದೇಶ ಸಾರಿದಶ್ರೀ ಆದಿನಾಥ ತೀರ್ಥಂಕರರು ಪ್ರಾತಃಸ್ಮರಣೀಯರು ; ಹೊಂಬುಜ ಸ್ವಾಮೀಜಿ

Written by Mahesh Hindlemane

Published on:

ರಿಪ್ಪನ್‌ಪೇಟೆ ; ಜೈನ ಧರ್ಮದ ಪ್ರಥಮ ತೀರ್ಥಂಕರ ಶ್ರೀ 1008 ಆದಿನಾಥ ತೀರ್ಥಂಕರರವರು ಜೈನ ಧರ್ಮದ ಮೂಲ ಸಿದ್ಧಾಂತಗಳನ್ನು, ವಿಶ್ವದಲ್ಲೆಲ್ಲ ಶಾಂತಿ, ಭ್ರಾತೃತ್ವದ ಧರ್ಮ ಸಂದೇಶವನ್ನು ಸಾರಿದವರು ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು ಶ್ರೀ ಆದಿನಾಥ ಸ್ವಾಮಿಯವರು ಮೋಕ್ಷಕಲ್ಯಾಣ ಮಹೋತ್ಸವದ ಧಾರ್ಮಿಕ ವಿಧಿ-ವಿಧಾನಗಳ ಬಳಿಕ ಪ್ರವಚನದಲ್ಲಿ ತಿಳಿಯಬಯಸಿದರು.

WhatsApp Group Join Now
Telegram Group Join Now
Instagram Group Join Now

ಅಸಿ, ಮಸಿ, ಕೃಷಿ, ಆದಿ ವಿದ್ಯೆಗಳನ್ನು ಮನುಕುಲಕ್ಕೆ ಹೇಳಿ ಕೊಟ್ಟ ಆದಿನಾಥರು ಬ್ರಾಹ್ಮಿ ಸುಂದರಿಯರಿಗೆ ವಿಧ್ಯೆ ಹೇಳಿಕೊಡುವ ಮೂಲಕ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಒತ್ತು ಕೊಟ್ಟವರು. ಅಂತಿಮವಾಗಿ ಕೈಲಾಸ ಪರ್ವತದಲ್ಲಿ ಆತ್ಮ ಸಾಕ್ಷಾತ್ಕಾರ ಮಾಡಿಕೊಂಡು ಮೋಕ್ಷಕ್ಕೆ ಹೋದರು.

ಅಹಿಂಸಾ ಧರ್ಮ ಪಥದಲ್ಲಿ ಪ್ರಾಣಿ ಪಕ್ಷಿಗಳ, ಸಸ್ಯ ಜೀವಿಗಳ ಸಂರಕ್ಷಣೆ ಮಾಡಬೇಕು. ಮಾನವ ಸಮಾಜದಲ್ಲಿ ಸಹಬಾಳ್ವೆ, ಸಾಮರಸ್ಯದ ಮನೋಭಾವವು ಸರ್ವತ್ರ ಪಸರಿಸಲು ಶ್ರೀ ಆದಿನಾಥ ತೀರ್ಥಂಕರ ಪ್ರಣೀತ ಜೈನ ಧರ್ಮ ಸಾರದ ಸತ್‌ಪರಿಣಾಮದಿಂದ ಅಕ್ಷಯ ಸುಖ ಪ್ರಾಪ್ತಿಯಾಗುತ್ತದೆ ಎಂದು ತಿಳಿಸಿ, ಪ್ರಾತಃಸ್ಮರಣೀಯರಾಗಿರುವರು ಎಂಬ ಶುಭ ಭಾವನೆಯನ್ನು ಸ್ವಸ್ತಿಶ್ರೀಗಳವರು ಹೇಳಿ, ಭಕ್ತರನ್ನು ಹರಸಿ, ಆಶೀರ್ವದಿಸಿದರು.

ಹೊಂಬುಜ ಶ್ರೀಕ್ಷೇತ್ರ ನಗರ ಜಿನಾಲಯದಲ್ಲಿ ಭಕ್ತವೃಂದ, ಕುಂದಕುಂದ ವಿದ್ಯಾಪೀಠದ ವಿದ್ಯಾರ್ಥಿಗಳು ಶ್ರೀ ಆದಿನಾಥ ಸ್ವಾಮಿಯ ಪೂಜೆ ನೆರವೇರಿಸಿದರು.

ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಶ್ರೀ ನೇಮಿನಾಥ ಸ್ವಾಮಿ, ಶ್ರೀ ಮಹಾವೀರ ಸ್ವಾಮಿ, ಶ್ರೀ ಸರಸ್ವತಿ ದೇವಿ, ಶ್ರೀ ಕೂಷ್ಮಾಂಡಿನಿ ದೇವಿ ಜಿನಾಲಯಗಳಲ್ಲಿ ವಿಶೇಷ ಪೂಜೆಗಳು ಜರುಗಿದವು. ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಸ್ತೋತ್ರಗಳನ್ನು ಪಠಿಸಿ, ಪೂಜೆ ಸಮರ್ಪಿಸಲಾಯಿತು.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment