Ripponpete

ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಗೆ ಮುತ್ತಿಗೆ ; ವಿದ್ಯುತ್ ಅವಘಡದಿಂದ ಸಾವನ್ನಪ್ಪಿದ ಮೃತನ ಕುಟುಂಬಕ್ಕೆ ಉದ್ಯೋಗದ ಭರವಸೆ

ರಿಪ್ಪನ್‌ಪೇಟೆ ; ವಿದ್ಯುತ್ ಲೈನ್ ದುರಸ್ತಿ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಕಂಬದಲ್ಲೇ ಕಾರ್ಮಿಕ ಕೇಶವ ಎಂಬಾತ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಕುಟುಂಬಕ್ಕೆ ಉದ್ಯೋಗ ನೀಡಬೇಕು ಮತ್ತು ತಕ್ಷಣ ಪರಿಹಾರ ಕೊಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಮತ್ತು ಸಂಬಂಧಿಕರು ಬುಧವಾರ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ವಿದ್ಯುತ್ ಗುತ್ತಿಗೆದಾರ ಹಾಗೂ ಮೆಸ್ಕಾಂ ಅಧಿಕಾರಿಗಳ ಬೇಜವಾದ್ದಾರಿಯಿಂದಾಗಿ ಬಿಳಕಿ ಬಳಿ ವಿದ್ಯುತ್ ಲೈನ್ ದುರಸ್ತಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕ ಕೇಶವ ಮೃತಪಟ್ಟಿದ್ದು ಅತನ ಕುಟುಂಬಕ್ಕೆ ಸೂಕ್ತ ನ್ಯಾಯ ಕಲ್ಪಿಸಬೇಕೇಂದು ಒತ್ತಾಯಿಸಿ ಕುಟುಂಬದವರು ಮತ್ತು ಸಾರ್ವಜನಿಕರು ಮೃತನ ಮರಣೋತ್ತರ ಪರೀಕ್ಷೆಗೆ ತಡೆಯೊಡ್ಡಿ ಮೆಸ್ಕಾಂ ಕಛೇರಿ ಎದುರು ದಿಢೀರ್ ಪ್ರತಿಭಟನೆ ನಡೆಸಿದರು.

ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಚಿದಂಬರ ಮತ್ತು ಚಿಕ್ಕಜೇನಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಎನ್.ಪಿ.ರಾಜು ಮಧ್ಯಸ್ಥಿಕೆ ವಹಿಸಿ ಮಾತನಾಡಿ, ದುರ್ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಗುತ್ತಿಗೆದಾರ ದೇವರಾಜ್ ಮಳವಳ್ಳಿ, ಪವರ್‌ಮಾನ್ ಕೃಷ್ಣ, ಕೆದಲುಗುಡ್ಡೆ ವಿದ್ಯುತ್ ಪರಿವರ್ತಕ ಅಧಿಕಾರಿ, ಸಹಾಯಕ ಇಂಜಿನಿಯರ್ ವಿರುದ್ಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆದರೆ ಮಾನವೀಯತೆ ದೃಷ್ಠಿಯಿಂದ ಗುತ್ತಿಗೆದಾರ 5 ಲಕ್ಷ ರೂ. ಹಾಗೂ ಮೆಸ್ಕಾಂನಿಂದ ಒಂದು ಲಕ್ಷ ರೂ. ಪರಿಹಾರವಾಗಿ ನೀಡಲು ಒಪ್ಪಿದ್ದಾರೆ. ಮೃತನ ತಂಗಿಗೆ ಮೆಸ್ಕಾಂ ಕಛೇರಿಯಲ್ಲಿ ಗುತ್ತಿಗೆ ನೌಕರರಾಗಿ ಕೆಲಸಕ್ಕೆ ಸೇರಿಸಿಕೊಳ್ಳುವ ಭರವಸೆ ನೀಡಿದಾರೆ. ಈ ಹಿನ್ನಲೆಯಲ್ಲಿ ಸಂಬಂಧಿಕರು ಮತ್ತು ಸಾರ್ವಜನಿಕರು ಮೃತ ಯುವಕನ ಮರಣೋತ್ತರ ಪರೀಕ್ಷೆಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಂತರ ಮೃತ ಕೇಶವನ ದೇಹವನ್ನು ಗೋಣಿಕೆರೆಯ ಗ್ರಾಮದಲ್ಲಿ ಅಂತ್ಯಕ್ರಿಯೆ ಜರುಗಿತು.

ಪ್ರತಿಭಟನೆಯಲ್ಲಿ ಚಿದಂಬರ, ಎನ್.ಪಿ.ರಾಜು, ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಮುಖಂಡರಾದ ನಾಗೇಶ, ವೇದಾವತಿ ಮತ್ತು ಗೀತಾ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>