Sigandur Bridge: ದಶಕಗಳ ಕಾತರತೆಗೆ ಲೋಕಾರ್ಪಣೆಯ ಕ್ಷಣಗಣನೆ !

Written by Koushik G K

Updated on:

Sigandur Bridge: ಮಲೆನಾಡು ತನ್ನ ನೈಸರ್ಗಿಕ ಸೌಂದರ್ಯ ಹಾಗೂ ಪ್ರಾಕೃತಿಕ ಸಂಪತ್ತಿನಿಂದಲೇ ವಿಶ್ವದ ಗಮನ ಸೆಳೆದಿದೆ. ಈ ಮಲೆನಾಡ ಹಚ್ಚ ಹಸಿರು ಪ್ರದೇಶದ ಹೃದಯ ಭಾಗವಾದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಶರಾವತಿ ನದಿಯ ಹಿನ್ನೀರಿನ ಅಂಬಾರಗೋಡ್ಲು – ಕಳಸವಳ್ಳಿ ನಡುವಿನ ಪ್ರದೇಶಕ್ಕೆ ನಿರ್ಮಾಣವಾಗಿರುವ ಸಿಗಂದೂರು ಸೇತುವೆ,ರಾಜ್ಯಕ್ಕೆ ಮಾತ್ರವಲ್ಲದೆ ದೇಶಕ್ಕೂ ಹೆಮ್ಮೆ ತಂದ ಮಹತ್ವದ ಯೋಜನೆ.

WhatsApp Group Join Now
Telegram Group Join Now
Instagram Group Join Now

430 ಕೋಟಿ ರೂ. ವೆಚ್ಚದಲ್ಲಿ 2.44 ಕಿ.ಮೀ ಉದ್ದದ ಕೇಬಲ್ ಆಧಾರಿತ ಸೇತುವೆ ರೂಪುಗೊಂಡಿದ್ದು, ಇದು ಕರ್ನಾಟಕದ ಅತೀ ಉದ್ದದ ಇನ್‌ಲ್ಯಾಂಡ್ ಕೇಬಲ್ ಸ್ಟೇಡ್ ಬ್ರಿಡ್ಜ್ ಆಗಿದೆ. ಅತ್ಯಾಧುನಿಕ ತಂತ್ರಜ್ಞಾನದಲ್ಲಿ ನಿರ್ಮಾಣಗೊಂಡ ಈ ಸೇತುವೆ ಸಂಪರ್ಕದ ನೆಲೆ ರೂಪಿಸುತ್ತಿದೆ. ಇತ್ತೀಚೆಗೆ ಸೇತುವೆಯಲ್ಲಿ ಲೋಡ್ ಟೆಸ್ಟಿಂಗ್ ಕೂಡ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಸಂಪರ್ಕದ ಹೊಸ ಅಧ್ಯಾಯ

ಈ ಸೇತುವೆಯ ಮೂಲಕ ಶರಾವತಿ ಹಿನ್ನೀರದ ಇತರ ಭಾಗಗಳನ್ನು ಸಂಪರ್ಕಿಸಲು ಸಾಧ್ಯವಾಗಲಿದ್ದು, ಇದು ಸ್ಥಳೀಯ ನಾಗರಿಕರಿಗೆ ಮಾತ್ರವಲ್ಲದೆ ಪ್ರವಾಸೋದ್ಯಮಕ್ಕೂ ಮಹತ್ವದ ಬದಲಾವಣೆಯಾಗಲಿದೆ.

ಕೃತಜ್ಞತೆ ವ್ಯಕ್ತಪಡಿಸಿದ ಸಂಸದರು

ಈ ಐತಿಹಾಸಿಕ ಯೋಜನೆಯು ದಶಕಗಳಿಂದ ಜನತೆಯ ಕನಸು ಆಗಿದ್ದಿದ್ದು, ಇಂದು ಲೋಕಾರ್ಪಣೆಯ ಸುಸಂದರ್ಭವನ್ನು ಎದುರುನೋಡುತ್ತಿರುವುದು ಸಂತೋಷದ ಸಂಗತಿ. ಈ ಮಹತ್ವದ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಶ್ರಮಿಸಿದವರಲ್ಲಿ ಪೂಜ್ಯ ತಂದೆಯವರಾದ ಬಿ.ಎಸ್. ಯಡಿಯೂರಪ್ಪ ಅವರ ಪಾತ್ರ ಅಮೂಲ್ಯವಾಗಿದೆ. ಅವರ ದೂರದೃಷ್ಟಿ ಹಾಗೂ ನಿರಂತರ ಸಾದ್ಧ್ಯತೆಯ ಶ್ರಮದಿಂದ ಈ ಸೇತುವೆ ಇಂದು ಸಾಕಾರವಾಗುತ್ತಿದೆ.

ಇದೇ ವೇಳೆ, ಈ ಯೋಜನೆಗೆ ಅಗತ್ಯವಾದ ಅನುದಾನ ಒದಗಿಸಿ, ಮಲೆನಾಡು ಮತ್ತು ನಾಡಿನ ಸಂಪರ್ಕ ವ್ಯವಸ್ಥೆಗೆ ಬಲವರ್ಧನೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಧನ್ಯವಾದಗಳನ್ನ ವ್ಯಕ್ತಪಡಿಸಿದ್ದಾರೆ.

https://www.facebook.com/share/p/12KCh3pCSHo

Read More :ಸಿಗಂದೂರು ಸೇತುವೆಯಲ್ಲಿ ಲೋಡ್ ಟೆಸ್ಟಿಂಗ್ ಪೂರ್ಣ!ಸಂಪರ್ಕದ ಹೊಸ ಅಧ್ಯಾಯದ ಪ್ರಾರಂಭಕ್ಕೆ ಕ್ಷಣಗಣನೆ !

Leave a Comment