ಸಾಗರ – ಮಲೆನಾಡಿನ ಹೆಬ್ಬಾಗಿಲಾದ ಸಾಗರ ತಾಲ್ಲೂಕಿನ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ. ಜುಲೈ 14 ಸೋಮವಾರ ನಡೆಯಲಿರುವ ಈ ಐತಿಹಾಸಿಕ ಸಮಾರಂಭಕ್ಕೆ ಸಾಗರ ನಗರದ ನೆಹರೂ ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧವಾಗುತ್ತಿದೆ.
ಬೃಹತ್ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಪ್ರಹ್ಲಾದ್ ಜೋಷಿ, ರಾಜ್ಯ ಸರ್ಕಾರದ ಸಚಿವರು, ಶಾಸಕರು, ಸಂಸದರು ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದು, ಹತ್ತು ಸಾವಿರಕ್ಕಿಂತ ಹೆಚ್ಚು ಜನ ಸೇರಲಿದ್ದಾರೆ ಎನ್ನಲಾಗಿದೆ.
ಹೊಳೇಬಾಗಿಲು ಬಳಿ ನಿರ್ಮಾಣವಾಗಿರುವ ಈ ಸೇತುವೆ ಮಲೆನಾಡಿನ ಅಭಿವೃದ್ಧಿಗೆ ನಾಂದಿ ಹಾಡಲಿದ್ದು, ಇದರಿಂದ ಸಿಗಂದೂರು ಹಾಗೂ ಸುತ್ತಮುತ್ತಲ ಗ್ರಾಮಗಳಿಗೆ ಸುಗಮ ಸಂಪರ್ಕ ದೊರೆಯಲಿದೆ. ಆರು ದಶಕಗಳ ಕನಸು ಈಡೇರಲಿರುವ ಈ ಸಂದರ್ಭ, ಸ್ಥಳೀಯರು ಭಾವನಾತ್ಮಕವಾಗಿ ಪಾಲ್ಗೊಳ್ಳಲು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
ಕಾರ್ಯಕ್ರಮ ವಿವರಗಳು:
- ಬೆಳಿಗ್ಗೆ 10:30 – ನಿತಿನ್ ಗಡ್ಕರಿ ಅವರಿಂದ ಸೇತುವೆ ಲೋಕಾರ್ಪಣೆ
- 11:00 – ಸಿಗಂದೂರು ದೇವಿಗೆ ವಿಶೇಷ ಪೂಜೆ
- ಮಧ್ಯಾಹ್ನ 12:00 – ನೆಹರೂ ಮೈದಾನದಲ್ಲಿ ಸಾರ್ವಜನಿಕ ಸಮಾರಂಭ
ಈ ಮಹತ್ವದ ಕಾರ್ಯಕ್ರಮಕ್ಕೆ ಎಲ್ಲರನ್ನು ಆಹ್ವಾನಿಸಲಾಗಿದೆ.

