Thirthahalli

ಬಿ.ಎಸ್. ಯಡಿಯೂರಪ್ಪನವರ ಬದ್ಧತೆ,ಸಂಕಲ್ಪದ ಮೂಲ ಕಾರಣದಿಂದ ಸಿಗಂದೂರು ಸೇತುವೆ ಲೋಕಾರ್ಪಣೆ: ಆರಗ ಜ್ಞಾನೇಂದ್ರ

ತೀರ್ಥಹಳ್ಳಿ: ಶರಾವತಿ ಸಂತ್ರಸ್ತರ 60ವರ್ಷದ ಶಾಪ ವಿಮೋಚನೆಯ ಮಂಗಳಮಯ ಕಾರ್ಯಕ್ರಮವಾದ ರೂ.423ಕೋಟಿ ವೆಚ್ಚದ ಬೃಹತ್ ಸಿಗಂದೂರು ಸೇತುವೆಯು ಜುಲೈ 14ರ ಸೋಮವಾರದಂದು ಮಧ್ಯಾನ್ಹ 12ಕ್ಕೆ ಲೋಕಾರ್ಪಣೆಗೊಳ್ಳಲಿದೆ,ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬದ್ಧತೆ ಮತ್ತು ಸಂಕಲ್ವ,ಸಂಸದ ಬಿ.ವೈ.ರಾಘವೇಂದ್ರರವರ ವಿಶೇಷ ಆಸಕ್ತಿಯೆ ಈ ಸೇತುವೆ ನಿರ್ಮಾಣಗೊಳ್ಳಲು ಮೂಲ ಕಾರಣ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಪಟ್ಟಣದ ಶಾಸಕರ ಕಛೇರಿಯಲ್ಲಿ ನೆಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ವಿಶೇಷ ತಂತ್ರಜ್ಞಾನದೊಂದಿಗೆ ಈ ಸೇತುವೆ ನಿರ್ಮಾಣಗೊಂಡಿದ್ದು,ಮುಂದಿನ ದಿನಗಳಲ್ಲಿ ಇದೊಂದು ಆಕರ್ಷಕ ಪ್ರವಾಸಿ ಕೇಂದ್ರವಾಗಲಿದೆ ಎಂದರು.

ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ,ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ,ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ,ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮುಂತಾದವರ ಉಪಸ್ಥಿಯಲ್ಲಿ ಈ ಸೇತುವೆ ಲೋಕಾರ್ಪಣೆಗೊಳ್ಳಲಿದೆ,ನಂತರ ಸಾಗರದ ನೆಹರು ಮೈದಾನದಲ್ಲಿ ಸಾರ್ವಜನಿಕ ಸಭೆ ಏರ್ಪಡಿದಲಾಗಿದೆ ಎಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಕೇಂದ್ರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜಿಲ್ಲೆಯಲ್ಲಿ ಅಭಿವೃದ್ಧಿ ಯೆನ್ನುವುದು ಪವಾಡದಂತಾಗಿದೆ,ಜಿಲ್ಲೆಯಲ್ಲಿ ಅಭಿವೃದ್ಧಿ ಶರವೇಗದಲ್ಲಿ ಸಾಗುತ್ತಿದೆ,ಶಿವಮೊಗ್ಗ ಲೋಕ ಸಭಾ ಕ್ಷೇತ್ರದಲ್ಲಿ ರೂ.2056.26 ಕೋಟಿ ವೆಚ್ಚದ ಕಾಮಗಾರಿಗಳು ಮಂಜೂರಾಗಿ ಪ್ರಗತಿಯಲ್ಲಿರುವುದು ಹೆಮ್ಮೆಯ ವಿಚಾರ ಎಂದರು.

ಪಶ್ಚಿಮ ಘಟ್ಟದ ರೈತರಿಗೆ ಹಿಂದಿನಿಂದಲೂ ಅನ್ಯಾಯವಾಗುತ್ತಲೇ ಬಂದಿದೆ,ಎಲ್ಲಾ ಸರಕಾರಗಳು ಈ ವಿಚಾರದಲ್ಲಿ ವಿಫಲವಾಗಿದೆ,ಶರಾವತಿ ಸಂತ್ರಸ್ತರ ಬದುಕಿಗೆ ಈ ಸೇತುವೆ ನಿರ್ಮಾಣದಿಂದ ಹೊಸ ಕನಸು ಮೂಡಿದೆ ಎಂದರು.

ಈ ಸೇತುವೆಗೆ ಬಿ.ಎಸ್.ಯಡಿಯೂರಪ್ಪನವರ ಹೆಸರು ಇಡಬೇಕೆಂದು ಮಾತು ಕೇಳಿಬರುತ್ತಿದ್ದು,ಆದರೆ ಸಿಗಂದೂರು ಸೇತುವೆ ಹೆಸರು ಸೂಕ್ತ ಎಂದು ಪ್ರೆಶ್ನೆಯೊಂದಕ್ಕೆ ಉತ್ತರಿಸಿದರು.

ಈ ಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಸಂದೇಶ್ ಜವಳಿ,ಪ್ರಶಾಂತ್ ಕುಕ್ಕೆ,ಸೊಪ್ಪುಗುಡ್ಡೆ ರಾಘವೇಂದ್ರ, ಸಂತೋಷ್ ದೇವಾಡಿಗ,ಪ್ರಮೋದ್ ಪೂಜಾರಿ,ಅತಿತ್.ಸಿ.,ಸಾತ್ವಿಕ್ ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650