ಸಿಗಂದೂರು ಸೇತುವೆ ಬಳಿ ಗೇಟ್ ಸಿಬ್ಬಂದಿಗೆ ಮಚ್ಚು ತೋರಿ ಬೆದರಿಸಿದ ಪ್ರವಾಸಿಗ !

Written by Koushik G K

Published on:

ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಸಿಗಂದೂರು ಸೇತುವೆಯ ಭಾಗದಲ್ಲಿ ಪ್ರವಾಸಿಗನೊಬ್ಬ ಗೇಟ್ ಸಿಬ್ಬಂದಿಗೆ ಮಚ್ಚು ತೋರಿಸಿ ಬೆದರಿಸಿದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಧಾರವಾಡ ಮೂಲದ ವ್ಯಕ್ತಿಯೊಬ್ಬನು ತನ್ನ ಕುಟುಂಬದೊಂದಿಗೆ ಕಾರಿನಲ್ಲಿ ಸಿಗಂದೂರಿಗೆ ಪ್ರವಾಸಕ್ಕೆ ಬಂದಿದ್ದ. ಗೇಟ್ ಬಳಿ ವಾಹನಗಳನ್ನು ಸರದಿಯಲ್ಲಿ ಬಿಡುವ ವಿಚಾರದಲ್ಲಿ ಗೇಟ್ ಸಿಬ್ಬಂದಿಯೊಂದಿಗೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭ ಆತ ತನ್ನ ಕಾರಿನಿಂದ ಮಚ್ಚು ತೆಗೆದು ತೋರಿಸಿ ಬೆದರಿಸಿರುವ ಘಟನೆ ನಡೆದಿದೆ.

ತಕ್ಷಣ ಗೇಟ್ ಸಿಬ್ಬಂದಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಆರೋಪಿತ ಪ್ರವಾಸಿಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಆದರೆ ಗೇಟ್ ಸಿಬ್ಬಂದಿಯಿಂದ ಲಿಖಿತ ದೂರು ಸಲ್ಲಿಸಲ್ಪಡದ ಹಿನ್ನೆಲೆಯಲ್ಲಿ, ಪೊಲೀಸರು ಪ್ರವಾಸಿಗನಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

Read More

Adhaar Card : 3 ದಿನಗಳಲ್ಲಿ ಈ ಕೆಲಸ ಮಾಡಿ ಇಲ್ಲವಾದಲ್ಲಿ ಪಾವತಿಸಬೇಕು ಇಷ್ಟು ಹಣ !

SSC ನೇಮಕಾತಿ 2025: ಒಟ್ಟು 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ !

Leave a Comment