ಗಾಯಕಿ ಸುಧಾಗೌಡಗೆ ಸಂಗೀತ ಸೇವಾರತ್ನ ರಾಜ್ಯ ಪ್ರಶಸ್ತಿ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಬೆಂಗಳೂರಿನ ಕರ್ನಾಟಕ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಟಾನ ಸುವರ್ಣ ಕರ್ನಾಟಕ ಪ್ರೆಸ್ ಅಸೋಸಿಯೇಷನ್ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಪ್ರಶಸ್ತಿ ಪ್ರದಾನ ರಾಜ್ಯ ಮಟ್ಟದ ಶಿಕ್ಷಕರ ಕವಿಗೋಷ್ಠಿ ಹಾಗೂ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಗ್ರಾಮೀಣ ಗಾಯಕಿ ಸುಧಾಗೌಡರ ಅನನ್ಯ ಸೇವೆಯನ್ನು ಪರಿಗಣಿಸಿ ಸಂಗೀತ ಸೇವಾರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕುಗ್ರಾಮ ನೇರಲಮನೆ ಗ್ರಾಮದ ಸುಧಾಗೌಡ ತಮ್ಮ ಸಂಗೀತ ಗಾನಸುಧೆಯ ಮೂಲಕ ಸಂಗೀತಾಸಕ್ತರನ್ನು ತಮ್ಮ ಗಾಯನದ ಮೂಲಕ ಆಕರ್ಷಿಸುವುದರೊಂದಿಗೆ ಜನಪ್ರಿಯತೆಗೆ ಯಶಸ್ವಿಯಾಗಿದ್ದಾರೆ.

ಪತಿಯನ್ನು ಕಳೆದುಕೊಂಡರು ಧೈರ್ಯಗೆಡದೆ ತನ್ನ ಎರಡು ಮಕ್ಕಳ ಪಾಲನೆ ಪೋಷಣೆ ಮಾಡಿಕೊಂಡು ಜೀವನಕ್ಕಾಗಿ ಸಂಗೀತವನ್ನು ಆಶ್ರಯಿಸಿಕೊಂಡ ಇವರು ತಾಲ್ಲೂಕು, ಜಿಲ್ಲೆ, ಅಂತರ ಜಿಲ್ಲೆಗಳಿಗೆ ತೆರಳಿ ಸಂಗೀತ ಕಾರ್ಯಕ್ರಮವನ್ನು ನೀಡುವುದರೊಂದಿಗೆ ಕಲಾರಸಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇವರ ಈ ಸಂಗೀತ ಕಾರ್ಯಕ್ರಮ ಗ್ರಾಮೀಣ ಪ್ರದೇಶದಲ್ಲಿ ಪ್ರತಿಭೆ ಇನ್ನಿತರರಿಗೆ ಸ್ಫೂರ್ತಿಯಾಗಲೆಂದು ಆಶಿಸುವ ಮೂಲಕ ಗ್ರಾಮೀಣ ಪ್ರತಿಭೆಯನ್ನು ಗುರುತಿಸಿ ಸಂಗೀತಾ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿರುವ ಸಂಸ್ಥೆಯನ್ನು ಸಂಗೀತಾಸಕ್ತರು ಅಭಿನಂದಿಸಿದ್ದಾರೆ.

Leave a Comment