ಹೊಸನಗರ

ಕಾರಕ್ಕಿ ಈಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ SKDRDP ಯಿಂದ 1 ಲಕ್ಷ ರೂ. ಮೊತ್ತದ ಚೆಕ್ ವಿತರಣೆ

ಹೊಸನಗರ : ತಾಲೂಕಿನ ಕೋಡೂರು ವಲಯದ ಕಾರಕ್ಕಿ ಗ್ರಾಮದ ಈಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಕ್ಷೇತ್ರದಿಂದ ಒಂದು ಲಕ್ಷ ರೂ. ಮಂಜೂರಾಗಿದೆ.

WhatsApp Group Join Now
Telegram Group Join Now
Instagram Group Join Now

ಈ ಒಂದು ಲಕ್ಷ ರೂ. ಮೊತ್ತದ ಡಿಡಿಯನ್ನು ಶಿವಮೊಗ್ಗ ಜಿಲ್ಲೆಯ ನಿರ್ದೇಶಕರಾದ ಮುರುಳಿಧರ್ ಶೆಟ್ಟಿ ಹಾಗೂ ತಾಲ್ಲೂಕು ಯೋಜನಾಧಿಕಾರಿ ಪ್ರದೀಪ್, ಕೋಡೂರು ವಲಯದ ಮೇಲ್ವಿಚಾರಕಿ ಉಮಾ, ಸೇವಾ ಪ್ರತಿನಿಧಿಯ ಸಮ್ಮುಖದಲ್ಲಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ಯೋಜನಾಧಿಕಾರಿ ಪ್ರದೀಪ್ ಆರ್ ಮಾತನಾಡಿ, ನಾವು ಹೊಸನಗರ ತಾಲ್ಲೂಕಿನಲ್ಲಿ ವಿವಿಧ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಸಾಕಷ್ಟು ಹಣವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಾಗೂ ಶ್ರೀ ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಸಹಾಯ ಹಸ್ತದಿಂದ ನೀಡುತ್ತಾ ಬಂದಿದ್ದು, ನಾವು ನೀಡುವ ಹಣ ದೇವಸ್ಥಾನಕ್ಕೆ ಅಳಿಲು ಸೇವೆಯಾಗಿದ್ದು, ಈ ಹಣ ಸರಿಯಾದ ರೀತಿಯಲ್ಲಿ ಸದ್ಭಳಕೆಯಾಗಲಿ ಎಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಸಂದರ್ಭದಲ್ಲಿ ದೇವಸ್ಥಾನದ ಸಮಿತಿ ಅಧ್ಯಕ್ಷ ಸತೀಶ್, ಉಪಾಧ್ಯಕ್ಷರು ಮತ್ತು ಪದಾಧಿಕಾರಿಗಳು, ಒಕ್ಕೂಟದ ಅಧ್ಯಕ್ಷ ಸುರೇಶ್, ಕೋಡೂರು ಗ್ರಾಮ ಪಂಚಾಯತಿ ಅಧ್ಯಕ್ಷ ಜಯಪ್ರಕಾಶ್, ಸದಸ್ಯ ಯೋಗೇಂದ್ರಪ್ಪ, ಸಂಘದ ಸದಸ್ಯರುಗಳು, ಗ್ರಾಮಸ್ಥರು ಇದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]