SORABA | ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವ ನದಿಯಲ್ಲಿ ನಾಪತ್ತೆಯಾದ ಘಟನೆ ತಾಲೂಕಿನ ಯಡಗೊಪ್ಪ-ಯಲವಾಟ ಗ್ರಾಮದಲ್ಲಿ ನಡೆದಿದೆ.
ಉದ್ರಿ ವಡ್ಡಿಗೇರೆ ಗ್ರಾಮದ ನಿವಾಸಿ ಯಲ್ಲಪ್ಪ (45) ನದಿಯಲ್ಲಿ ನಾಪತ್ತೆಯಾದ ವ್ಯಕ್ತಿ. ಈತ ಶುಕ್ರವಾರ ಸಂಜೆ ತನ್ನ ಸಹೋದರನೊಂದಿಗೆ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದಾಗ ಘಟನೆ ಸಂಭವಿಸಿದೆ. ನದಿಯ ನೀರಿನ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿದ ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿ 8ರವರೆಗೂ ಕಾರ್ಯಾಚರಣೆ ನಡೆಸಿದ್ದಾರೆ.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
ಇನ್ನು ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮಂಜುಳಾ ಹೆಗಡಾಳ್, ಪಿಎಸ್ಐ ನಾಗರಾಜ್, ತಾಪಂ ಇಒ ಡಾ. ಪ್ರದೀಪ್ ಕುಮಾರ್ ಭೇಟಿ ನೀಡಿದರು. ಈವರೆಗೂ ಯಲ್ಲಪ್ಪ ಪತ್ತೆಯಾಗಿಲ್ಲ.

