ಸೋರೆಕೊಪ್ಪ ಚಿನ್ನಪ್ಪ ನಿಧನ !

Written by Mahesha Hindlemane

Published on:

ಹೊಸನಗರ : ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೋರೆಕೊಪ್ಪದ ಕಟ್ಟ ಬಿಜೆಪಿ ಕಾರ್ಯಕರ್ತ ಚಿನ್ನಣ್ಣ (75) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಬೆಳಗ್ಗೆ 9:00 ಗಂಟೆಗೆ ಕೊನೆಯುಸಿರೆಳೆದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ, ಭಾರತೀಯ ಜನತಾ ಪಕ್ಷದ ಕಾರ್ಯಕರ್ತರಾಗಿ ರಾಜಕೀಯಕ್ಕೆ ಧುಮುಕಿದ ಚಿನ್ನಪ್ಪರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್, ಬಿಜೆಪಿ ಮುಖಂಡರುಗಳು, ಆರ್ಯ ಈಡಿಗ ಸಂಘದ ಮುಖಂಡರುಗಳು, ನೂರಾರು ಅಭಿಮಾನಿಗಳು, ಗ್ರಾಮಸ್ಥರು ಅವರ ನಿವಾಸಕ್ಕೆ ತೆರಳಿ ಮೃತರ ಅಂತಿಮ ದರ್ಶನ ಪಡೆದರು.

ಸೋರೆಕೊಪ್ಪದ ತುಂಬು ಕುಟುಂಬದ ಹಿರಿಯರಾದ ಇವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಆರು ಜನ ಸಹೋದರರು, ಮೂವರು ಸಹೋದರಿಯರನ್ನು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಸೋಮವಾರ ಮಧ್ಯಾಹ್ನ ಸೋರೆಕೊಪ್ಪದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿತು.

Leave a Comment