ಹೊಸನಗರ

ಮಕರ ಸಂಕ್ರಾಂತಿ ಅಂಗವಾಗಿ ಹೊಸನಗರ ಶ್ರೀ ಲಕ್ಷ್ಮೀ ಜನಾರ್ಧನಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ಸಂಪನ್ನ

ಹೊಸನಗರ ; ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀ ಜನಾರ್ಧನಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿ-ಭಾವದಿಂದ ಸಂಪನ್ನಗೊಂಡವು.

WhatsApp Group Join Now
Telegram Group Join Now
Instagram Group Join Now

ಬೆಳಗ್ಗೆ ದೇವಸ್ಥಾನದಲ್ಲಿ ಭಕ್ತರ ಕಲ್ಯಾಣಾರ್ಥವಾಗಿ ಪವಮಾನ ಸೂಕ್ತ ಪಾರಾಯಣ ನಡೆಯಿತು. ನಂತರ ಪಂಚಾಮೃತಾಭಿಷೇಕ ಹಾಗೂ ಪವಮಾನ ಕಲಶಾಭಿಷೇಕವನ್ನು ಶ್ರೀ ದೇವರಿಗೆ ಶ್ರದ್ಧಾಪೂರ್ವಕವಾಗಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಭಕ್ತರಿಂದ ಅಷ್ಟೋತ್ತರ ಶತಾಧಿಕ ಸಹಸ್ರನಾಮ ಪಾರಾಯಣವೂ ನಡೆಯಿತು.

ಮಧ್ಯಾಹ್ನ ಮಹಾಮಂಗಳಾರತಿ ನೆರವೇರಿಸಿ ಭಕ್ತರಿಗೆ ತೀರ್ಥ-ಪ್ರಸಾದ ವಿತರಿಸಲಾಯಿತು. ಸಂಜೆ ವೇಳೆಗೆ ವಿಷ್ಣು ಸಹಸ್ರನಾಮ ಪಾರಾಯಣ, ಭಜನೆ ಹಾಗೂ ಮಹಾಮಂಗಳಾರತಿ ನೆರೆವೇರಲಿದೆ. ರಾತ್ರಿ ತೀರ್ಥ-ಪ್ರಸಾದ ವಿತರಣೆಯೊಂದಿಗೆ ದಿನಪೂರ್ತಿ ಪೂಜಾ ಕಾರ್ಯಕ್ರಮಗಳು ಜರುಗಲಿವೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೊಸನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು  ಈಗಾಗಲೇ ದರ್ಶನ ಪಡೆದುಕೊಂಡಿದ್ದಾರೆ.

ದೇವಸ್ಥಾನ ಸಮಿತಿ ಅಧ್ಯಕ್ಷ ಎಂ.ಎನ್. ಸುಧಾಕರ್ ಮತ್ತು ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲ ಭಕ್ತರಿಗೆ ಕೃತಜ್ಞತೆ ಸಲ್ಲಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]