SHIVAMOGGA ; ಶಿವಮೊಗ್ಗ ಮಹಾನಗರ ಪಾಲಿಕೆಯ ಪರಿಷತ್ ಸಭಾಭವನದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಹೊಸನಗರ ತಾಲೂಕು ಜೇನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಸಗಲ್ಲಿ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕೆ.ಎನ್. ಸ್ಫೂರ್ತಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ.

ಕು|| ಸ್ಫೂರ್ತಿ ನಾಗರಾಜ ಮತ್ತು ನಾಗರತ್ನ ದಂಪತಿಗಳ ಪುತ್ರಿಯಾಗಿದ್ದು ಈಕೆಯ ಅಪ್ರತಿಮ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಆರ್ ಕೃಷ್ಣಮೂರ್ತಿ, ಶಿಕ್ಷಣ ಸಮನ್ವಯಾಧಿಕಾರಿ ಎಂ ರಂಗನಾಥ್, ಶಾಲೆಯ ಮುಖ್ಯ ಶಿಕ್ಷಕ ಬಿ.ಎನ್ ಪರಶುರಾಮಪ್ಪ, ಶಾಲಾ ಶಿಕ್ಷಕ ವೃಂದ, ಪೋಷಕರು, ಶಾಲಾ ಅಭಿವೃದ್ಧಿ ಸಮಿತಿಯವರು ಹಾಗೂ ಗ್ರಾಮಸ್ಥರು ಶುಭ ಹಾರೈಸಿ ಅಭಿನಂದಿಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.