ರಿಪ್ಪನ್ಪೇಟೆ ; ಹುಂಚ ಗ್ರಾ.ಪಂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮಟಗಾರು ಇಲ್ಲಿಗೆ ಶ್ರೀಗಂಧ ಫೌಂಡೇಶನ್ (ರಿ) ಬೆಂಗಳೂರು ವತಿಯಿಂದ ಉಚಿತ ನೋಟ್ ಪುಸ್ತಕ, ಲೇಖನ ಸಾಮಗ್ರಿ, ಬ್ಯಾಗ್ ಹಾಗೂ ರೇನ್ ಕೋಟ್ ವಿತರಿಸಲಾಯಿತು.
ಹತ್ತು ವರ್ಷಗಳಿಂದ ಶಾಲೆಗೆ ನಿರಂತರವಾಗಿ ಕಲಿಕಾ ಸಾಮಗ್ರಿ, ಶಾಲೆಗೆ ಅಗತ್ಯ ಕಂಪ್ಯೂಟರ್, ಟಿವಿ, ಪ್ರಿಂಟರ್ ಮುಂತಾದ ಅಗತ್ಯತೆಗಳನ್ನು ಪೂರೈಸುತ್ತಲೇ ಬಂದಿರುವ ಸಂಸ್ಥೆಯೊಂದಿಗಿನ ಒಡನಾಟಕ್ಕೆ, ದಶ ವರ್ಷ ಪೂರೈಸಿದ ಹರ್ಷಕ್ಕೆ ವಿನೂತನ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಿ ವಿವಿಧ ಅಭಿಪ್ರಾಯ ಸಂಗ್ರಹಣೆಯ ‘ದಶಕ ಸಂಚಿಕೆ’ ಬಿಡುಗಡೆ ಮಾಡಲಾಯಿತು.

ಸಂಸ್ಥೆಯ ರೂವಾರಿಗಳಲ್ಲೊಬ್ಬರಾದ ಸುಂದರೇಶ್ ಮಾತನಾಡಿ, ಶಾಲೆಯೊಂದಿಗಿನ ಒಡನಾಟವನ್ನು ಮೆಲುಕು ಹಾಕಿ, ಮುಂದಿನ ದಿನಗಳಲ್ಲಿ ಭಾರತದಲ್ಲಿ ಎಲ್ಲರೂ ಉಳ್ಳವರಾಗಿ ಬಡತನ ನಿರ್ಮೂಲನೆಯಾಗಲಿ ಸಶಕ್ತ ಸಮಾಜ ನಿರ್ಮಾಣವಾಗಲಿ ಎಂದು ಹಾರೈಸಿದರು.
ಶ್ರೀಧರಮೂರ್ತಿ ಕಡಸೂರು ಮಾತನಾಡಿ, ಸದ್ಗುಣಗಳ ಗಂಧವಾಹಕರಂತಿರುವ ಶ್ರೀಗಂಧ ಫೌಂಡೇಶನ್ ನ ಕಾರ್ಯವ್ಯಾಪ್ತಿಯ ಅಗಾಧತೆ ಕುರಿತು ಪ್ರಶಂಸಿಸಿದರು.

ಈ ಸಂದರ್ಭದಲ್ಲಿ ದಾನಿಗಳಾದ ಅಭಿನವ್ ಕಲ್ಪನಾ ದಂಪತಿಗಳನ್ನು ಗೌರವಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಮೋಹನ್ ಶ್ರೀಗಂಧ ಫೌಂಡೇಶನ್ನ ಅಧ್ಯಕ್ಷ ಪ್ರಶಾಂತ್ ಪತಂಗೆ, ನಿಕಟಪೂರ್ವ ಅಧ್ಯಕ್ಷ ಆನಂದ, ಫೌಂಡೇಶನ್ನ ಸದಸ್ಯರು, ಮುಖ್ಯಶಿಕ್ಷಕಿ ರತ್ನಕುಮಾರಿ ಹಾಗೂ ಶಿಕ್ಷಕ ವೃಂದ, ಎಸ್.ಡಿ.ಎಂ.ಸಿ ಸದಸ್ಯರು ಗ್ರಾಮಸ್ಥರು, ಪೋಷಕವೃಂದ, ಹಿರಿಯ ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.