ರಿಪ್ಪನ್ಪೇಟೆ ; ಭಗವಾನ ಶ್ರೀ ಪಾರ್ಶ್ವನಾಥ ತೀರ್ಥಂಕರರ ಮತ್ತು ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಅಮ್ಮನವರ ವಾರ್ಷಿಕ ರಥಯಾತ್ರಾ ಮಹೋತ್ಸವವು ಪೂರ್ವ ಪರಂಪರೆಯಂತೆ, ಆಗಮೋಕ್ತ ಶಾಸ್ತ್ರದನ್ವಯ ಇಂದ್ರಪ್ರತಿಷ್ಠೆ, ವಿಮಾನಶುದ್ಧಿ, ಯಕ್ಷ ಪ್ರತಿಷ್ಠೆ, ಧ್ವಜಾರೋಹಣ, ಮಹಾನೈವೇದ್ಯ ಪೂಜೆ, ನಾಂದಿಮಂಗಲ, ವಾಸ್ತುಶಾಂತಿ, ಮೃತ್ತಿಕಾ ಸಂಗ್ರಹ ವಿಧಾನಗಳು ನೆರವೇರಿದುವು.
ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪೀಠಾಧಿಪತಿಗಳಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಜಿನಾಗಮ ಪದ್ಧತಿಯ ವಿಧಿ-ವಿಧಾನಗಳು ನೆರವೇರಿದವು.

ಗಣಾಧಿಪತಿ, ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರು ಸಸಂಘದ ಮುನಿಶ್ರೀಯವರು, ಆರ್ಯಿಕೆಯರು ಉಪಸ್ಥಿತರಿದ್ದರು. ಊರ ಪರವೂರ ಭಕ್ತವೃಂದದವರು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಅಂದು ಸಂಜೆ ನಾಗವಾಹನೋತ್ಸವವು ಸಾಂಗವಾಗಿ ಪೂಜಾ ವಿಧಿಗಳೊಂದಿಗೆ ನೆರವೇರಿಸಿ, ನಗರ ಪ್ರದಕ್ಷಿಣೆಯ ಶ್ರೀ ವಿಹಾರ ನಡೆಯಿತು. ಸಾಲಾಂಕೃತ ಶೋಭಾಯಾತ್ರೆ ಮೆರಗು ನೀಡಿತು.

ಸೇವಾಕರ್ತೃರಾದ ರಚನಾ ಜೈನ್, ಸಂಜೀವ್ ಜೈನ್, ಅಶೋಕ ಕಂಪನಿ, ದೆಹಲಿಯವರು ಪೂಜಾ ವಿಧಿ, ಭೋಜನ ಸೇವೆಯನ್ನು ಅರ್ಪಿಸಿದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.