ರಿಪ್ಪನ್ಪೇಟೆ ; ಪಟ್ಟಣದ ಸವಿತಾ ಸಮಾಜ ಘಟಕದ ಆಶ್ರಯದಲ್ಲಿ ರಾಜ್ಯಮಟ್ಟದ ಕ್ರಿಕೆಟ್ ಕ್ರೀಡಾಕೂಟವನ್ನು ರಿಪ್ಪನ್ಪೇಟೆಯ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಭವ್ಯವಾಗಿ ಆಯೋಜಿಸಲಾಯಿತು. ರಾಜ್ಯದ ವಿವಿಧ ಜಿಲ್ಲೆಗಳ ಕ್ರಿಕೆಟ್ ತಂಡಗಳು ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದವು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ (KFIDC) ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು, “ಕ್ರೀಡೆಗಳು ಯುವಕರ ವ್ಯಕ್ತಿತ್ವ ವಿಕಾಸಕ್ಕೆ ಆಧಾರ. ಕ್ರೀಡೆಗಳ ಮೂಲಕ ಶಿಸ್ತು, ತಂಡಭಾವನೆ ಹಾಗೂ ಸಮಾಜದ ಏಕತೆ ಬೆಳೆಸಬಹುದು. ಪ್ರತಿಯೊಬ್ಬ ಯುವಕ-ಯುವತಿಯೂ ಕ್ರೀಡಾಂಗಣದತ್ತ ಹೆಜ್ಜೆ ಹಾಕಿದರೆ ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ. ನಮ್ಮ ರಾಜ್ಯದ ಕ್ರೀಡಾಪಟುಗಳು ದೇಶದ ಹೆಮ್ಮೆಯಾಗುವ ಸಾಮರ್ಥ್ಯ ಹೊಂದಿದ್ದಾರೆ. ಅವರ ಪರಿಶ್ರಮಕ್ಕೆ ಪ್ರೋತ್ಸಾಹ ನೀಡುವುದು ನಮ್ಮೆಲ್ಲರ ಜವಾಬ್ದಾರಿ. ಕ್ರೀಡಾಂಗಣದಲ್ಲಿ ಬೆಳೆಸುವ ಶ್ರಮ, ಶಿಸ್ತಿನ ಮನೋಭಾವ ಮತ್ತು ತಂಡಭಾವನೆ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸಿನ ಹಾದಿ ತೋರಿಸುತ್ತದೆ” ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಅವರು ಕ್ರೀಡಾಕೂಟಕ್ಕಾಗಿ ₹ 20,000 ಸಹಾಯಧನ ಘೋಷಿಸಿ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿದರು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಸವಿತಾ ಸಮಾಜದ ಯುವ ಘಟಕ ಅಧ್ಯಕ್ಷ ರಾಘವೇಂದ್ರ ಶಿಕಾರಿಪುರ, ರಿಪ್ಪನ್ಪೇಟೆ ಘಟಕದ ಅಧ್ಯಕ್ಷ ಸಿದ್ದೇಶ್ ಭಂಡಾರಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್, ಸದಸ್ಯರಾದ ಆಸಿಫ್ ಭಾಷಾ ಸಾಬ್, ನಿರೂಪ್ ಕುಮಾರ್, ಗಣಪತಿ ಗವಟೂರು, ಮಧುಸೂದನ್ ಡಿ. ಈ., ಪ್ರಕಾಶ್ ಪಾಲೇಕರ, ಕಾನಗೋಡು ಉಮಾಕರ್, ಎಪಿಎಂಸಿ ಮಾಜಿ ಅಧ್ಯಕ್ಷ ಈಶ್ವರಪ್ಪಗೌಡ, ನೇಮಪ್ಪ ಬಂಡಿ, ಜಿ.ಆರ್. ಗೋಪಾಲಕೃಷ್ಣ, ಹಿರಿಯಣ್ಣ ಭಂಡಾರಿ, ಬಿಎಸ್ಎನ್ಎಲ್ ಶ್ರೀಧರ್ ಸೇರಿದಂತೆ ಸವಿತಾ ಸಮಾಜದ ಜಿಲ್ಲಾ ಹಾಗೂ ತಾಲೂಕು ಪ್ರತಿನಿಧಿಗಳು ಭಾಗವಹಿಸಿದ್ದರು.

ಆಟಗಾರರ ಉತ್ಸಾಹಭರಿತ ಪ್ರದರ್ಶನ ಕ್ರೀಡಾ ಆಸಕ್ತರಿಗೆ ಮನರಂಜನೆ ನೀಡಿತು. ಅಂತಿಮ ಹಂತದಲ್ಲಿ ಜಯಶೀಲ ತಂಡಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.