ಭದ್ರಾವತಿ

ಟ್ರ್ಯಾಕ್ಟರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ; ವಿದ್ಯಾರ್ಥಿನಿ ಸಾವು

ಭದ್ರಾವತಿ ; ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾರಂದೂರು ಎಂಬಲ್ಲಿ ಇಂದು ಸಂಜೆ ನಡೆದಿದೆ.

inshot_20250118_1935379216358691247993356141.jpg

ಕೃತಿ (21) ಮೃತಪಟ್ಟ ವಿದ್ಯಾರ್ಥಿನಿ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

inshot_20250118_1933415461523418856376130837.jpg

ಶಿವಮೊಗ್ಗದಿಂದ ಕುಟುಂಬದವರೊಂದಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಅಮೃತಾಪುರಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

inshot_20250118_193402441991533755617320780.jpg
inshot_20250118_1936547634354072161834712906.jpg

ಕಾಗದನಗರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

inshot_20250118_1935047373170766343495063671.jpg

Leave a Comment