ರಿಪ್ಪನ್ಪೇಟೆ ; ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ನಲ್ಲಿ ಇರುವ ಬೋರ್ವೆಲ್ಗಳಲ್ಲಿ ನೀರಿಲ್ಲದೆ ವಿದ್ಯಾರ್ಥಿಗಳಿಗೆ ಕುಡಿಯಲು ಮತ್ತು ಶೌಚಾಲಯಕ್ಕೆ ಹೋಗಲು ನೀರಿಲ್ಲದೆ ಪರದಾಡುವಂತಾಗಿದೆ ಎಂದು ಕಾಲೇಜ್ ವಿದ್ಯಾರ್ಥಿಗಳು ತಮ್ಮ ನೋವಯನ್ನು ಮಾಧ್ಯಮದವರ ಬಳಿ ಹಂಚಿಕೊಂಡರು.
ಕಳೆದ ಒಂದು ಎರಡು ವರ್ಷದ ಹಿಂದೆ ಕಾಲೇಜ್ ಅವರಣದೊಳಗೆ ಕೊಳವೆ ಬಾವಿಯನ್ನು ತೆಗೆಸಲಾಗಿದ್ದು ಆ ಕೊಳವೆ ಬಾವಿ ಸಂಪೂರ್ಣವಾಗಿ ಬತ್ತಿ ಹೋಗಿ ಮೋಟಾರ್ನಲ್ಲಿ ನೀರು ಬಾರದೇ ವಿದ್ಯಾರ್ಥಿಗಳು ಕುಡಿಯುವ ನೀರಿಲ್ಲದೆ ಮತ್ತು ಶೌಚಾಲಯಕ್ಕೂ ನೀರಿಲ್ಲದೆ ಪರದಾಡುವಂತಾಗಿದೆ ಎಂದು ವಿದ್ಯಾರ್ಥಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಗ್ರಾಮೀಣ ಪ್ರದೇಶದ ಕಾಲೇಜ್ನಲ್ಲಿ ಸುಮಾರು 700 ಕ್ಕೂ ಅಧಿಕ ವಿದ್ಯಾರ್ಥಿಗಳಲ್ಲಿ 450 ಕ್ಕೂ ಅಧಿಕ ವಿದ್ಯಾರ್ಥಿನಿರು ಮತ್ತು 250 ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಪ್ರಾಚಾರ್ಯರು ಸೇರಿದಂತೆ ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗ ಸೇರಿದಂತೆ 45 ಕ್ಕೂ ಅಧಿಕ ಜನ ಕಾಲೇಜ್ನಲ್ಲಿದ್ದು ಇವರಿಗೆ ಕುಡಿಯಲು ಮತ್ತು ಶೌಚಾಲಯಕ್ಕೆ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಬೇಸಿಗೆ ಕಾಲವಾಗಿರುವ ಕಾರಣ ಬಾಯಾರಿಕೆ ತಣಿಸಿಕೊಳ್ಳಲು ನೀರಿಗಾಗಿ ಪರದಾಡಬೇಕಾಗಿದೆ. ಈ ಕೂಡಲೇ ಸಂಬಂಧಪಟ್ಟ ಕಾಲೇಜ್ ಪ್ರಚಾರ್ಯರ ಮತ್ತು ಸಿ.ಡಿ.ಸಿ ಹಾಗೂ ಜನಪ್ರತಿನಿಧಿಗಳು ಇತ್ತ ಗಮನ ಹರಿಸಿ ತುರ್ತು ಕೊಳವೆ ಬಾವಿಯನ್ನು ತೆಗೆಸುವ ಮೂಲಕ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸುವಂತೆ ವಿದ್ಯಾರ್ಥಿ ಸಮೂಹ ಆಗ್ರಹಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





