ಹೊಸನಗರ

ವಿದ್ಯಾರ್ಥಿಗಳು ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಕೈ ಜೋಡಿಸಬೇಕು ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ ; ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಶಿಕ್ಷಣದ ನಂತರ ತಾವು ಓದಿದ ಕಾಲೇಜಿನ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು. ಜೊತೆಗೆ ನಿರಂತರವಾಗಿ ಆ ಕಾಲೇಜಿನೊಂದಿಗೆ ಸಂಪರ್ಕ ಹೊಂದಿರಬೇಕು. ಇದು ಕಾಲೇಜಿನ ಏಳಿಗೆಗೆ ಸಹಕಾರಿಯಾಗಲಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

WhatsApp Group Join Now
Telegram Group Join Now
Instagram Group Join Now

ಬುಧವಾರ ಇಲ್ಲಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2024-25ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ, ರೇಂಜರ್ಸ್ ಮತ್ತು ರೋವರ್ಸ್, ಕ್ರೀಡಾ ಚಟುವಟಿಕೆ, ಯುವ ರೆಡ್‌ ಕ್ರಾಸ್ ಘಟಕ ಮತ್ತು ವಿವಿಧ ಚಟುವಟಿಕೆಗಳ ಸಮಾರೋಪ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆ ಜೊತೆಗೆ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಸದೃಢ ದೇಹ, ಉತ್ತಮ ಆರೋಗ್ಯ ಹೊಂದುವ ಮೂಲಕ, ರಾಷ್ಟ್ರೀಯ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ವಿಫುಲ ಅವಕಾಶಗಳಿವೆ. ವಿದ್ಯಾರ್ಥಿ ಜೀವನದಲ್ಲಿ ತುಂಟಾಟ ಸಹಜ. ತುಂಟಾಟದೊಂದಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳುವ‌ ಕಡೆ ಪ್ರತಿಯೊಬ್ಬರೂ ಗಮನಹರಿಸುವಂತೆ ವಿದ್ಯಾರ್ಥಿಗಳಿಗೆ ಬೇಳೂರು ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳಲ್ಲಿ ಸಂಯಮ ಹಾಗು ಸದೃಢ ಆರೋಗ್ಯ ವೃದ್ಧಿಸಲು ಕ್ರೀಡೆ ಸಹಕಾರಿ ಆಗಿದೆ. ಅಲ್ಲದೇ ಭವಿಷ್ಯದಲ್ಲಿ ಸಮಾಜ ಸತ್ಪ್ರಜೆಯಾಗಿ ರೂಪುಗೊಳ್ಳಲು ಕ್ರೀಡೆ ಸಹಕಾರಿ ಎಂದರು.  ಅಂತೆಯೇ, ಒರ್ವ ವಿದ್ಯಾರ್ಥಿ ಎಷ್ಟೇ ದೊಡ್ಡ ಹುದ್ದೆ ಅಲಂಕರಿಸಿದರೂ ತನಗೆ ವಿದ್ಯೆ ಕಲಿಸಿದ ಗುರುವನ್ನು ಗೌರವಿಸಬೇಕೆಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಾಸ್ತಿಕಟ್ಟೆ ಸುಬ್ರಮಣ್ಯ, ಗ್ರಾಮ ಪಂಚಾಯತ್ ಸದಸ್ಯ ಮಹೇಂದ್ರ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಶ್ವಿನಿ ಕುಮಾರ್, ಪ್ರಾಂಶುಪಾಲ ಡಾ.ಕೆ ಉಮೇಶ್, ಮುಂತಾದವರು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]