ಶಿವಮೊಗ್ಗ ಸುದ್ದಿ

ಶಾಲಾ ಸಮಯಕ್ಕೆ ಬಾರದ ಬಸ್ : ತೀರ್ಥಹಳ್ಳಿಯಲ್ಲಿ ರಸ್ತೆ ತಡೆದು ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

ಶಾಲಾ-ಕಾಲೇಜುಗಳಿಗೆ ತೆರಳಲು ಸೂಕ್ತ ಸಮಯಕ್ಕೆ ಬಸ್ ಸೌಕರ್ಯವಿಲ್ಲದೆ ಬೇಸತ್ತ ವಿದ್ಯಾರ್ಥಿಗಳು ತೀರ್ಥಹಳ್ಳಿ ತಾಲೂಕಿನ ಕೊಂಡ್ಲೂರು ಬಳಿ ದಿಢೀರ್ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

InShot 20260911 181120377

ತೀರ್ಥಹಳ್ಳಿ : ಶಾಲಾ-ಕಾಲೇಜುಗಳಿಗೆ ತೆರಳಲು ಸೂಕ್ತ ಸಮಯಕ್ಕೆ ಬಸ್ ಸೌಕರ್ಯವಿಲ್ಲದೆ ಬೇಸತ್ತ ವಿದ್ಯಾರ್ಥಿಗಳು ತೀರ್ಥಹಳ್ಳಿ ತಾಲೂಕಿನ ಕೊಂಡ್ಲೂರು ಬಳಿ ದಿಢೀರ್ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಸಮಸ್ಯೆ ಏನು?

ತೀರ್ಥಹಳ್ಳಿಯ ವಿವಿಧ ಶೈಕ್ಷಣಿಕ ಸಂಸ್ಥೆಗಳಿಗೆ ಪ್ರತಿದಿನ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರಯಾಣ ಬೆಳೆಸುತ್ತಾರೆ. ಈ ಹಿಂದೆ ಇದ್ದ ಖಾಸಗಿ ಬಸ್‌ಗಳ ಸೇವೆ ಸಮರ್ಪಕವಾಗಿಲ್ಲ ಎಂಬ ಕಾರಣಕ್ಕೆ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ, ಪ್ರಸ್ತುತ ಸರ್ಕಾರಿ ಬಸ್ ಕೂಡ ತಡವಾಗಿ ಸಂಚರಿಸುತ್ತಿದ್ದು, ತೀರ್ಥಹಳ್ಳಿ ತಲುಪುವಾಗ ಬೆಳಿಗ್ಗೆ 10:30 ಆಗುತ್ತಿದೆ. ಇದರಿಂದಾಗಿ ಪ್ರತಿನಿತ್ಯ ವಿದ್ಯಾರ್ಥಿಗಳು ತಮ್ಮ ಮೊದಲ ಅವಧಿಯ ತರಗತಿಗಳನ್ನು ತಪ್ಪಿಸಿಕೊಳ್ಳುವಂತಾಗಿದೆ.

ವೇಳಾಪಟ್ಟಿ ಬದಲಾವಣೆ:

ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬೆಳಿಗ್ಗೆ 8:30ಕ್ಕೆ ಬಸ್ ಹೊರಟು, 9:30ರ ಸುಮಾರಿಗೆ ತೀರ್ಥಹಳ್ಳಿ ತಲುಪುವಂತೆ ವೇಳಾಪಟ್ಟಿಯನ್ನು ಕಡ್ಡಾಯವಾಗಿ ಬದಲಾಯಿಸಬೇಕು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಹೆಚ್ಚುವರಿ ಬಸ್:

ಪ್ರಯಾಣಿಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವುದರಿಂದ ದಟ್ಟಣೆ ತಪ್ಪಿಸಲು ಇದೇ ಮಾರ್ಗದಲ್ಲಿ ಮತ್ತೊಂದು ಹೆಚ್ಚುವರಿ ಬಸ್ ಬಿಡಬೇಕು.

ಎಚ್ಚರಿಕೆ:

ವಿದ್ಯಾರ್ಥಿಗಳು ನಡೆಸಿದ ಈ ದಿಢೀರ್ ಪ್ರತಿಭಟನೆಗೆ ಶಿಕ್ಷಕರು ಮತ್ತು ಪೋಷಕರು ಕೂಡ ಬೆಂಬಲ ಸೂಚಿಸಿದ್ದಾರೆ. ಸಾರಿಗೆ ಇಲಾಖೆ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಬಸ್ ಸಮಸ್ಯೆಯನ್ನು ಬಗೆಹರಿಸಬೇಕು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]