ಹೊಸನಗರ

ಹೊಸನಗರ ; ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ ವಿದ್ಯಾರ್ಥಿಗಳು

ಹೊಸನಗರ ; ನಮ್ಮದು ಕೃಷಿ ಪ್ರಧಾನ ದೇಶ. ಅದರೆ ಇಂದಿನ ಪೀಳಿಗೆಗೆ ಭತ್ತ, ರಾಗಿ, ಜೋಳ ಎಂದರೇನು ಎಂದು ಗೊತ್ತಿಲ್ಲ. ಅದನ್ನು ಪರಿಚಯಿಸುವ ಉದ್ದೇಶ ಹಾಗೂ ರೈತರು ಗದ್ದೆಗಳಲ್ಲಿ ಹೇಗೆ ಸಸಿಗಳನ್ನು ನಾಟಿ ಮಾಡುತ್ತಾರೆ. ಯಾವ ಕ್ರಮ ಅನುಸರಿಸುತ್ತಾರೆ. ಯಾವ ರೀತಿ ಭತ್ತದ ಸಸಿಗಳನ್ನು ಗದ್ದೆಗಳಲ್ಲಿ ನಾಟಿ ಮಾಡಬೇಕು ಎಂದು ಕಲಿಸುವ ಉದ್ದೇಶದಿಂದ ಹೊಸನಗರ ತಾಲ್ಲೂಕು ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯ ವಿದ್ಯಾರ್ಥಿಗಳನ್ನು ಮೇಲಿನಕಲ್ಲುಗುಡ್ಡೆ ಕುಮಾರಗೌಡ ಎಂಬುವರ ಗದ್ದೆಗೆ ಕರೆದುಕೊಂಡು ಹೋಗಿ ಭತ್ತದ ಸಸಿ ನಾಟಿಯನ್ನು ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್ ಕುಮಾರ್ ಆಚಾರ್ಯರವರ ನೇತೃತ್ವದಲ್ಲಿ ಮಾಡಿಸಲಾಯಿತು.

WhatsApp Group Join Now
Telegram Group Join Now
Instagram Group Join Now

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಉಪಾಧ್ಯಕ್ಷೆ ನಾಗರತ್ನ, ಮುಖ್ಯ ಶಿಕ್ಷಕ ಗುರುಮೂರ್ತಿ, ಪಿಆರ್‌ಪಿ ನಾಗಬೂಷಣ್, ಶಿಕ್ಷಕ ಧರ್ಮಪ್ಪ, ಸುಮಾ, ಜಯಲಕ್ಷ್ಮಿ, ಪತ್ರಕರ್ತ ವಿಜೇಂದ್ರಪ್ರಭು, ಗಣೇಶ ಭಂಡಾರಿ, ಪ್ರಹ್ಲಾದ, ರಫೀ, ರಮೇಶ, ಸುಧೀರ, ರಾಘವೇಂದ್ರ, ಪ್ರವೀಣ್ ಉಲ್ಲಪ್ಪ ಹಾಗೂ ಎಸ್‌ಡಿಎಂಸಿ ಸದಸ್ಯರುಗಳು ಹಾಗೂ ಊರಿನ ಸಾರ್ವಜನಿಕರು ಹಾಗೂ ಎಲ್ಲ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]