Ripponpete

ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಬೇಸಿಗೆ ಶಿಬಿರ ಸಹಕಾರಿ

ರಿಪ್ಪನ್‌ಪೇಟೆ ; ಮಕ್ಕಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಲಿ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುವುದೆಂದು ಕೋಣಂದೂರು ಬೃಹನ್ಮಠದ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ರಿಪ್ಪನ್‌ಪೇಟೆಯ ಸರ್ಕಾರಿ ಪ್ರಾಥಮಿಕ ಮಾದರಿ ಪಾಠಶಾಲೆಯಲ್ಲಿ ಏರ್ಪಡಿಸಲಾಗಿರುವ ಹಳ್ಳಿ ಮಕ್ಕಳ ರಂಗ ಹಬ್ಬ-2025 ತರಬೇತಿ ಶಿಬಿರದಲ್ಲಿ ಶ್ರೀಗಳು ಭಾಗವಹಿಸಿ ಆಶೀರ್ವಚನ ನೀಡಿ, ಮಕ್ಕಳಲ್ಲಿನ ಕಲೆ ಸಾಹಿತ್ಯ ಇನ್ನಿತರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಇಂತಹ ಶಿಬಿರಗಳು ಉತ್ತಮ ವೇದಿಕೆಯಾಗಿದೆ. ಬರೀ ಪಠ್ಯ ಪುಸ್ತಕದ ಓದಿನ ಕಡೆಗೆ ಮಕ್ಕಳಲ್ಲಿ ಒತ್ತಡ ಹಾಕದೆ ಆವರಿಗೆ ರಜೆ ದಿನಗಳಲ್ಲಿ ಇಂತಹ ಕಲಿಕೆಗಳಲ್ಲಿ ತೊಡಗಿಸಿಕೊಳ್ಳಲು ಹೆಚ್ಚು ಒತ್ತು ನೀಡಬೇಕು ಮತ್ತು ಉತ್ತಮ ಶಿಕ್ಷಣದೊಂದಿಗೆ ಜಾನಪದ ಕಲೆ ಸಾಹಿತ್ಯದ ಅರಿವು ಮೂಡಿಸಿ ಮುಂದಿನ ಪೀಳಿಗಗೆ ಪರಿಚಯಿಸುವ ಕೆಲಸ ಮಾಡಬೇಕು ಆಗ ನಮ್ಮ ಸಂಸ್ಕೃತಿ ಸಂಸ್ಕಾರ ಉಳಿಸಲು ಸಾಧ್ಯವೆಂದರು.

ರಂಗ ನಿರ್ದೇಶಕ ಡಾ.ಆರ್.ಗಣೇಶ ಮಸರೂರು, ಸಿದ್ದಿವಿನಾಯಕ ದೇವಸ್ಥಾನ ಧರ್ಮದರ್ಶಿ ಈಶ್ವರಶೆಟ್ಟಿ, ರೈತ ಸಂಘದ ಮುಖಂಡ ಈಶ್ವರಪ್ಪಗೌಡ ಕುಕ್ಕಳಲೇ, ರಾಜ್ಯ ಪ್ರಶಸ್ತಿ ಪುರಸ್ಕೃತೆ ಶಿಕ್ಷಕಿ ಲಕ್ಷ್ಮಿ ಮಸರೂರು ಎಂ.ಎಸ್.ಜಗದೀಶ, ಧರ್ಮರಾಜ ಸಮಟಗಾರು, ಮೈಕ್ ದಾನಪ್ಪ ಮಲ್ಲಾಪುರ, ಅಶ್ವಿನಿ ಗಣೇಶ ಇನ್ನಿತರರು ಹಾಜರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>