ಶಿವಮೊಗ್ಗ ಸುದ್ದಿ

ಶಿವಮೊಗ್ಗಕ್ಕೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಡಾ. ಶರಣಪ್ರಕಾಶ ಪಾಟೀಲ್

ಬೆಂಗಳೂರು:ಶಿವಮೊಗ್ಗವನ್ನು ಮಲೆನಾಡು ಪ್ರದೇಶದ ಪ್ರಮುಖ ಪ್ರಾದೇಶಿಕ ಆರೋಗ್ಯ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಂಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

Read More>>ಸಿಗಂದೂರು ಹೇಳಿಕೆ : ಮಧು ಬಂಗಾರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಸಚಿವ ಹರತಾಳು ಹಾಲಪ್ಪ

ಬುಧವಾರ ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರು ಮಾತನಾಡಿ , ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಜೊತೆಗೂಡಿ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಸಿಮ್ಸ್) ಹಾಗೂ ಮೆಗ್ಗಾನ್‌ ಆಸ್ಪತ್ರೆಯ ಮೂಲಸೌಕರ್ಯ ಮತ್ತು ಸೇವಾ ವಿಸ್ತರಣೆ ಕುರಿತು ಸಚಿವರು ಪರಿಶೀಲನೆ ನಡೆಸಿದರು.

ಸಂಪೂರ್ಣ ಆರೋಗ್ಯ ಸೇವೆಗಾಗಿ ನವೀಕರಣೆ

ಈ ಸಭೆಯಲ್ಲಿ, ಶಿವಮೊಗ್ಗ ನಗರವನ್ನು ಪೂರ್ಣ ಪ್ರಮಾಣದ ಪ್ರಾದೇಶಿಕ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸುವ ನಿರ್ಧಾರ ಕೈಗೊಳ್ಳಲಾಯಿತು. ಇದರಿಂದ ಶಿವಮೊಗ್ಗ ಜಿಲ್ಲೆ ಹಾಗೂ ಸುತ್ತಮುತ್ತಲಿನ ಪ್ರದೇಶದ ಜನರಿಗೆ ಎಲ್ಲವಿಧದ ತಜ್ಞ ವೈದ್ಯಕೀಯ ಸೇವೆಗಳು ಒಂದೇ ಸ್ಥಳದಲ್ಲಿ ಲಭ್ಯವಾಗಲಿವೆ.

ಮಲೆನಾಡಿಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಕೇಂದ್ರದ ಅಡಿಯಲ್ಲಿ, ವೈದ್ಯಕೀಯ ಕಾಲೇಜುಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ಮತ್ತು ವಿವಿಧ ತಜ್ಞ ವಿಭಾಗಗಳೊಂದಿಗೆ ಜಗತ್ತಿನ ಮಟ್ಟದ ಮೂಲಸೌಕರ್ಯವನ್ನು ಹೊಂದಿರುವ ವೈದ್ಯಕೀಯ ಸಂಸ್ಥೆಗಳ ಸಂಕೀರ್ಣ ನಿರ್ಮಾಣವಾಗಲಿದೆ. ಶಿವಮೊಗ್ಗ ಈಗಾಗಲೇ ಉತ್ತಮ ರಸ್ತೆ, ರೈಲು ಹಾಗೂ ವಾಯು ಸಂಪರ್ಕ ಹೊಂದಿರುವುದರಿಂದ ಈ ಯೋಜನೆ ಯಶಸ್ವಿಯಾಗಲು ಅವಕಾಶಗಳಿವೆ ಎಂದು ಸಚಿವರು ವಿವರಿಸಿದರು.

“ಸಿಮ್ಸ್ ಮತ್ತು ಮೆಗ್ಗಾನ್‌ ಆಸ್ಪತ್ರೆಗಳು ಪ್ರಸ್ತುತ ಕಿಕ್ಕಿರಿದು ತುಂಬಿವೆ ಮತ್ತು ವೈದ್ಯರು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಹೊರೆಯನ್ನು ಕಡಿಮೆ ಮಾಡಲು ಮತ್ತು ಈ ಪ್ರದೇಶದಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಸುಧಾರಿಸಲು ಹೊಸ ಸ್ಪೆಷಾಲಿಟಿ ಮತ್ತು ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲು ಹೆಚ್ಚಿನ ಹಣವನ್ನು ಹೂಡುತ್ತೇವೆ” ಎಂದು ಸಚಿವರು ಸ್ಪಷ್ಟಪಡಿಸಿದರು.

“ಕಲಬುರಗಿಯನ್ನು ಕಲ್ಯಾಣ ಕರ್ನಾಟಕದ ಆರೋಗ್ಯ ಕೇಂದ್ರವಾಗಿ ಅಭಿವೃದ್ಧಿಪಡಿಸಿದ್ದಂತೆ, ಶಿವಮೊಗ್ಗವನ್ನೂ ಮಲೆನಾಡಿನ ವೈದ್ಯಕೀಯ ಸೇವಾ ಹಬ್ ಆಗಿ ರೂಪಿಸುತ್ತೇವೆ,” ಎಂದು ಡಾ. ಪಾಟೀಲ್ ತಿಳಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650