Chikmagaluru News

ನೇಣು ಬಿಗಿದುಕೊಂಡು ಸರ್ವೇ ಅಧಿಕಾರಿ ಆತ್ಮಹತ್ಯೆ !

ಮೂಡಿಗೆರೆ ; ಸರ್ವೇ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಗುರುವಾರ ವರದಿಯಾಗಿದೆ.

WhatsApp Group Join Now
Telegram Group Join Now
Instagram Group Join Now

ಶಿವಕುಮಾರ್ (55) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸರ್ವೇ ಅಧಿಕಾರಿಯಾಗಿದ್ದಾರೆ. ಮೂಲತಃ ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರಾದ ಶಿವಕುಮಾರ್ ಮೂಡಿಗೆರೆ ಸರ್ವೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಲ್ಲದೆ ಚಿಕ್ಕಮಗಳೂರು ನೇಕಾರರ ಸಂಘದ ನಿರ್ದೇಶಕರಾಗಿದ್ದರು. ಕಳೆದ ಹತ್ತು ವರ್ಷಗಳಿಂದ ಬಳಸುತ್ತಿದ್ದ ಸಿಮ್ ಅನ್ನು ಮೊನ್ನೆಯಷ್ಟೇ ಚೇಂಜ್ ಮಾಡಿದ್ದರು. ಹೀಗಾಗಿ ಸರ್ವೇ ಅಧಿಕಾರಿ ಶಿವಕುಮಾರ್ ಆತ್ಮಹತ್ಯೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

ಮೂಡಿಗೆರೆ ಪಟ್ಟಣದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಇರುವ ಬಾಡಿಗೆ ಮನೆಯಲ್ಲಿ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆ ಬಳಿ ಯಾರನ್ನೂ ಬಿಡದೆ ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]