Chikkamagaluru

ಕಡವೆ ಶಿಕಾರಿ ಮಾಡಿ ಮಾಂಸ ತಯಾರಿಸುತ್ತಿದ್ದವನ ಬಂಧನ

ಚಿಕ್ಕಮಗಳೂರು ; ಕಡವೆ ಶಿಕಾರಿ ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳ ವಾಹನ ಸಹಿತ ಎರಡು ಬಂದೂಕು ವಶಪಡಿಸಿಕೊಂಡಿದೆ.

WhatsApp Group Join Now
Telegram Group Join Now
Instagram Group Join Now

ಚಿಕ್ಕಮಗಳೂರು ವಲಯದ ಅತ್ತಿಗಿರಿ ಸೆಕ್ಷನ್, ತೋಗರಿಹಂಕಲ್ ಗ್ರಾಮದ ಕೂತನ್ಕುಲ್ ಎಸ್ಟೇಟ್ ನಲ್ಲಿ ಭಾನುವಾರ ನಸುಕಿನಲ್ಲಿ ತೋಟದ ರೈಟರ್ ದೇವಯ್ಯ ಕಡವೆ ಶಿಕಾರಿ ಮಾಡಿದ್ದ. ಶಿಕಾರಿ ಬಳಿಕ ಮಾಂಸವನ್ನು ತುಂಡು ಮಾಡುತ್ತಿದ್ದಾಗ ಅರಣ್ಯ ಸಂಚಾರಿ ದಳದವರು ದಾಳಿ ಮಾಡಿ ದೇವಯ್ಯರನ್ನು ಬಂಧಿಸಿದ್ದಾರೆ.

ಅಂದಾಜು 40 ಕೆ.ಜಿ ಮಾಂಸ ಮತ್ತು ಚರ್ಮ, ಚೂರಿ ಹಾಗೂ ಬೇಟೆಗೆ ಬಳಸುತ್ತಿದ್ದ 2 ಬಂದೂಕುಗಳನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವನ್ಯಜೀವಿ ಹಾಗೂ ಅರಣ್ಯ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]