5 ವರ್ಷದ ಬಾಲಕಿ ಅನುಮಾನಾಸ್ಪದ ಸಾವು, ಕಿವಿ ಓಲೆ, ಕಾಲ್ಗೆಜ್ಜೆ ನಾಪತ್ತೆ !

Written by Mahesh Hindlemane

Updated on:

AJJAMPURA ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯಲ್ಲಿದ್ದ 5 ವರ್ಷದ ಬಾಲಕಿ ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದ ರೈಲ್ವೇ ಸ್ಟೇಷನ್ ಬಳಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಬಾಲಕಿಯ ಕೆನ್ನೆ ಹಾಗೂ ಮುಖದ ಮೇಲೆ ಗಾಯದ ಗುರುತುಗಳಿದ್ದು, ಕಿವಿಯಲ್ಲಿದ್ದ ಓಲೆ, ಕಾಲಿನಲ್ಲಿದ್ದ ಚೈನು ನಾಪತ್ತೆಯಾಗಿದೆ ಎನ್ನಲಾಗಿದೆ. ಒಡವೆ ಕದ್ದವರೇ ಬಾಲಕಿಯನ್ನು ಹತ್ಯೆ ಮಾಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ.

ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದ ಮಂಜುನಾಥ ಮತ್ತು ಮಂಗಳ ದಂಪತಿಯ ಐದು ವರ್ಷದ ಮಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ತಂದೆ ತಾಯಿ ಇಬ್ಬರೂ ಕೆಲಸಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ.

ತೆಂಗಿನಕಾಯಿ ಮಂಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಂಜುನಾಥ ಹಾಗೂ ಮಂಗಳ ದಂಪತಿಯು ಮಗುವಿಗೆ ಜ್ವರವಿದ್ದ ಹಿನ್ನೆಲೆ ಮಗುವನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ ಊಟಕ್ಕೆ ಬಂದ ವೇಳೆ ಮಗಳು ಮೃತಪಟ್ಟಿರುವುದು ತಿಳಿದಿದೆ.

ಬಾಲಕಿಯ ಸಾವು ಅನುಮಾನದಿಂದ ಕೂಡಿದ್ದು, ಘಟನಾ ಸ್ಥಳಕ್ಕೆ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶ್ವಾನದಳ ಹಾಗೂ ಬೆಳಚ್ಚು ತಜ್ಞರ ತಂಡ ಪರಿಶೀಲನೆ ನಡೆಸಿದ್ದು, ಈ ಘಟನೆ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment