
ಮಲೆನಾಡಿನಲ್ಲಿ ಮಳೆ ಕೊರತೆ: ಹೊಸನಗರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ನಡುಮನೆ ಎಂದೇ ಖ್ಯಾತಿ ಹೊಂದಿರುವ ಹೊಸನಗರ ತಾಲ್ಲೂಕಿನಲ್ಲಿ 2026ನೇ ಸಾಲಿನಲ್ಲಿ ತೀವ್ರ ಮಳೆಯ ಕೊರತೆಯುಂಟಾಗಿದ್ದು, ಭೀಕರ ಬರಗಾಲದ ಛಾಯೆ ಆವರಿಸಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕನ್ನು ತಕ್ಷಣವೇ 'ಬರಪೀಡಿತ ಪ್ರದೇಶ' ಎಂದು ಘೋಷಿಸಬೇಕು ಹಾಗೂ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಮ್ಯಾಮ್ಕೋಸ್ ನಿರ್ದೇಶಕ ಹಾಗೂ ಹೊಸನಗರ ಕೃಷಿಕ ಸಮಾಜದ ಉಪಾಧ್ಯಕ್ಷ ಧರ್ಮೇಂದ್ರ ಹೆಚ್. ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.


