ಶಿವಮೊಗ್ಗ, ಆ.6: ಇಂದು ಶಿವಮೊಗ್ಗದಿಂದ ಮೈಸೂರು ಕಡೆಗೆ ಹೊರಟ್ಟಿದ್ದ ರೈಲಿನಲ್ಲಿ ತಾಂತ್ರಿಕ ದೋಷ ಸಂಭವಿಸಿ ತುಂಗಾ ನದಿಯ ಸೇತುವೆ ಮೇಲೆ ಒಂದಿಷ್ಟು ಬೋಗಿಗಳು ರೈಲಿನಿಂದ ಬೇರ್ಪಟ್ಟ ಘಟನೆ ಶಿವಮೊಗ್ಗದ ಹೊಳೆ ಬಸ್ ಸ್ಟಾಪ್ ಬಳಿಯಲ್ಲಿ ಸಂಭವಿಸಿದೆ.
ಘಟನೆ ವಿವರ:

ಶಿವಮೊಗ್ಗ ಟೌನ್ ರೈಲು ನಿಲ್ದಾಣದಿಂದ ಹೊರಟಿದ್ದ ಮೈಸೂರು ರೈಲು, ತುಂಗಾ ನದಿಯನ್ನು ದಾಟುತ್ತಿದ್ದಾಗ ಸೇತುವೆ ಮಧ್ಯದಲ್ಲಿ ಪ್ಯಾಸೆಂಜರ್ ಬೋಗಿ ರೈಲುನಿಂದ ಬೇರ್ಪಟ್ಟದೆ , ಆ ಬೋಗಿ ಮಿಕ್ಕ ರೈಲಿನಿಂದ ಬೇರ್ಪಟ್ಟ ಪರಿಣಾಮ, ಘಟನೆಯಲ್ಲಿ ರೈಲಿನ ಒಂದಷ್ಟು ಬೋಗಿಗಳು ಸೇತುವೆ ಮೇಲೆ ನಿಂತಿದ್ದವು. ಇನ್ನೊಂದಿಷ್ಟು ಬೋಗಿಗಳು ಮಲ್ಲೇಶ್ವರ ರೈಲ್ವೆ ಕ್ರಾಸಿಂಗ್ನಲ್ಲಿ ನಿಂತಿದ್ದವು ಮತ್ತು ತಾತ್ಕಾಲಿಕ ತುರ್ತು ಕ್ರಮ ಕೈಗೊಳ್ಳಲಾಯಿತು.
ಈ ಘಟನೆ ಬಳಿಕ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸದಿರುವುದು ಭದ್ರತಾ ಸಿಬ್ಬಂದಿಗೆ ನೆಮ್ಮದಿ ತಂದಿದೆ,ಸುಮಾರು 1 ಗಂಟೆ ತಡವಾಗಿ ರೈಲು ಮೈಸೂರಿಗೆ ಹೊರಟಿದೆ .
Talaguppa – Mysore train carriage separation

MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.