ಶಿವಮೊಗ್ಗ, ಆ.6: ಇಂದು ಶಿವಮೊಗ್ಗದಿಂದ ಮೈಸೂರು ಕಡೆಗೆ ಹೊರಟ್ಟಿದ್ದ ರೈಲಿನಲ್ಲಿ ತಾಂತ್ರಿಕ ದೋಷ ಸಂಭವಿಸಿ ತುಂಗಾ ನದಿಯ ಸೇತುವೆ ಮೇಲೆ ಒಂದಿಷ್ಟು ಬೋಗಿಗಳು ರೈಲಿನಿಂದ ಬೇರ್ಪಟ್ಟ ಘಟನೆ ಶಿವಮೊಗ್ಗದ ಹೊಳೆ ಬಸ್ ಸ್ಟಾಪ್ ಬಳಿಯಲ್ಲಿ ಸಂಭವಿಸಿದೆ.
ಘಟನೆ ವಿವರ:

ಶಿವಮೊಗ್ಗ ಟೌನ್ ರೈಲು ನಿಲ್ದಾಣದಿಂದ ಹೊರಟಿದ್ದ ಮೈಸೂರು ರೈಲು, ತುಂಗಾ ನದಿಯನ್ನು ದಾಟುತ್ತಿದ್ದಾಗ ಸೇತುವೆ ಮಧ್ಯದಲ್ಲಿ ಪ್ಯಾಸೆಂಜರ್ ಬೋಗಿ ರೈಲುನಿಂದ ಬೇರ್ಪಟ್ಟದೆ , ಆ ಬೋಗಿ ಮಿಕ್ಕ ರೈಲಿನಿಂದ ಬೇರ್ಪಟ್ಟ ಪರಿಣಾಮ, ಘಟನೆಯಲ್ಲಿ ರೈಲಿನ ಒಂದಷ್ಟು ಬೋಗಿಗಳು ಸೇತುವೆ ಮೇಲೆ ನಿಂತಿದ್ದವು. ಇನ್ನೊಂದಿಷ್ಟು ಬೋಗಿಗಳು ಮಲ್ಲೇಶ್ವರ ರೈಲ್ವೆ ಕ್ರಾಸಿಂಗ್ನಲ್ಲಿ ನಿಂತಿದ್ದವು ಮತ್ತು ತಾತ್ಕಾಲಿಕ ತುರ್ತು ಕ್ರಮ ಕೈಗೊಳ್ಳಲಾಯಿತು.
ಈ ಘಟನೆ ಬಳಿಕ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸದಿರುವುದು ಭದ್ರತಾ ಸಿಬ್ಬಂದಿಗೆ ನೆಮ್ಮದಿ ತಂದಿದೆ,ಸುಮಾರು 1 ಗಂಟೆ ತಡವಾಗಿ ರೈಲು ಮೈಸೂರಿಗೆ ಹೊರಟಿದೆ .
Talaguppa – Mysore train carriage separation

MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650