Sagara

ಬೈಕಿನಲ್ಲಿ ಶಾಲೆಗೆ ತೆರಳುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು !

SAGARA ; ಬೈಕಿನಲ್ಲಿ ಶಾಲೆಗೆ ತೆರಳುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ನರಸೀಪುರ ಗ್ರಾಮದ ಸರ್ಕಾರಿ ಶಾಲಾ ಶಿಕ್ಷಕ ಮಂಜುನಾಥ್ (57) ಮೃತಪಟ್ಟ ಶಿಕ್ಷಕ. ಇಂದು ಬೆಳಗ್ಗೆ ಜಂಬೆಕೊಪ್ಪ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸಲು ಬೈಕಿನಲ್ಲಿ ತೆರಳುತ್ತಿರುವ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.

ಮಂಜುನಾಥ್ ಅವರು ಹೆಂಡತಿ, ಓರ್ವ ಪುತ್ರ, ಪುತ್ರಿ, ಹಾಗೂ ಅಪಾರ ಶಿಕ್ಷಕ ವರ್ಗದವರನ್ನು ಅಗಲಿದ್ದಾರೆ. ಶಿಕ್ಷಕ ಮಂಜುನಾಥ್ ಮನೆಗೆ ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಇತ್ತೀಚೆಗೆ ಸಾಗರ ತಾಲೂಕು ಸಿರಿವಂತೆಯ ಸರ್ಕಾರಿ ಶಾಲೆಯ ಶಿಕ್ಷಕಿ ಶಿವಮೊಗ್ಗದ ಡಯಟ್ ನಲ್ಲಿ ನಡೆಯುವ ತರಬೇತಿಗಾಗಿ ತೆರಳುವ ಅವಸರದಲ್ಲಿ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ಸಂಭವಿಸಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>