ಚಿಕ್ಕಮಗಳೂರು ; ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನಿಂದ ಬಂದಿದ್ದ ಟೆಕ್ಕಿಯೋರ್ವ ದಿಢೀರ್ ಕುಸಿದು ಬಿದ್ದು ಹೃದಯಾಘಾತದಿಂದ ಸಾ*ವನ್ನಪ್ಪಿರುವಂತ ಘಟನೆ ನಡೆದಿದೆ.
ಮೃ*ತನನ್ನು ಬೆಂಗಳೂರು ಮೂಲದ ಸಾಫ್ಟ್ವೇರ್ ಇಂಜಿನಿಯರ್ ರಾಹುಲ್ (29) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ಪ್ರವಾಸದ ವೇಳೆಯಲ್ಲೇ ಹೃದಯಾಘಾತದಿಂದ ಸಾ*ವನ್ನಪ್ಪಿದ್ದಾನೆ.
ಚಿಕ್ಕಮಗಳೂರಿಗೆ ಐವರು ಸ್ನೇಹಿತ ಜೊತೆಗೆ ಸೇರಿ ಪ್ರವಾಸಕ್ಕೆ ರಾಹುಲ್ ತೆರಳಿದ್ದರು. ಚಿಕ್ಕಮಗಳೂರು ಹೊರವಲಯದ ಹೋಂ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತ ಉಂಟಾಗಿ ಸಾವನ್ನಪ್ಪಿದ್ದಾರೆ.
ಆಸ್ಪತ್ರೆಯಲ್ಲಿರುವಾಗಲೇ ಹೃದಯಾಘಾತಕ್ಕೆ ಮಹಿಳೆ ಬ*ಲಿ !
ಚಿಕ್ಕಮಗಳೂರು : ಆಸ್ಪತ್ರೆಯಲ್ಲಿರುವಾಗಲೇ ಮಹಿಳೆಯೊಬ್ಬರು ಕುಸಿದು ಬಿದ್ದು ಮೃ*ತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ದಾಕ್ಷಾಯಿಣಿ (50) ಮೃತ ಮಹಿಳೆ. ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ವಾರದ ಹಿಂದೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ದಾಕ್ಷಾಯಿಣಿ, ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪದೆಯುತ್ತಿದ್ದರು. ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದರು.
ಆಸ್ಪತ್ರೆಯ ವಾರ್ಡ್ನಲ್ಲಿ ನಡೆದಾಡುತ್ತಿದ್ದಾಗಲೇ ದಾಕ್ಷಾಯಿಣಿ ಅವರಿಗೆ ಹೃದಯಾಘಾತವಾಗಿದೆ. ಇದ್ದಕ್ಕಿದ್ದಂತೆ ಕುಸಿದು ಬಿದ್ದವರು ಕೊನೆಯುಸಿರೆಳೆದಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.