Categories: Tharikere

Video Viral | ಅಭ್ಯರ್ಥಿಗಳಿಂದ ಹಣ ಪಡೆದು ಗ್ರಾಮದ ಜನರಿಗೆ ನೀಡದೇ ತಾನೇ ಇಟ್ಟುಕೊಂಡ ಮುಖಂಡನಿಗೆ ಕೋಲಿನಿಂದ ಹಿಗ್ಗಾಮುಗ್ಗಾ ಬಾರಿಸಿದ ಮಹಿಳೆ !

ತರೀಕೆರೆ: ಅಭ್ಯರ್ಥಿಗಳಿಂದ ಹಣ ಪಡೆದು ಗ್ರಾಮದ ಜನರಿಗೆ ನೀಡದೇ ತಾನೇ ಇಟ್ಟುಕೊಂಡಿದ್ದಾನೆ ಎನ್ನಲಾದ ಗ್ರಾಮದ ಮುಖಂಡನಿಗೆ ಮಹಿಳೆಯೊಬ್ಬರು ಹಿಗ್ಗಾಮುಗ್ಗಾ ಬಾರಿಸಿದ ಘಟನೆ ನಡೆದಿದೆ.

ತಾಲೂಕಿನ ಪಿರಮೇನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಹಣ ನೀಡುತ್ತೇನೆ ಎಂದು ವಂಚಿಸಿದ ಮಂಜು ಎಂಬಾತನಿಗೆ ಕ್ಲಾಸ್‌ ತೆಗೆದುಕೊಂಡು ಮನಸ್ಸಿಗೆ ಬಂದಂತೆ ಕೋಲಿನಿಂದ ಬಾರಿಸಿದ್ದಾರೆ.


ಬಿಜೆಪಿ ಅಭ್ಯರ್ಥಿ ಸುರೇಶ್ ಮತ್ತು ಪಕ್ಷೇತರ ಅಭ್ಯರ್ಥಿ ಗೋಪಿಕೃಷ್ಣ ಹಮ್ಮಿಕೊಂಡಿದ್ದ ರೋಡ್‌ಶೋನಲ್ಲಿ ಭಾಗವಹಿಸಿದರೆ ದುಡ್ಡು ಕೊಡೋದಾಗಿ ಮಂಜು ಗ್ರಾಮಸ್ಥರಿಗೆ ಹೇಳಿ ಕರೆದೊಯ್ದಿದ್ದ. ಆದರೆ ಕಾರ್ಯಕ್ರಮ ಮುಗಿದರೂ ಗ್ರಾಮದ ಯಾರಿಗೂ ಆತ ದುಡ್ಡು ನೀಡಿಲ್ಲ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಆತನನ್ನು ರಸ್ತೆಯಲ್ಲೇ ತಡೆದು ಪ್ರಶ್ನಿಸಿದ್ದು. ಈ ವೇಳೆ ರೊಚ್ಚಿಗೆದ್ದ ಮಹಿಳೆ ಆತನಿಗೆ ಬೈಕ್‌ನಲ್ಲಿ ಕುಳಿತಿದ್ದಾಗಲೇ ಹಿಗ್ಗಾಮುಗ್ಗಾ ಬಾರಿಸಿದ್ದಾರೆ.


ಮಹಿಳೆ ಬೈಕ್‌ನಲ್ಲಿ ಕುಳಿತಿದ್ದ ಮಂಜುಗೆ ಕೋಲಿನಿಂದ ಮನಬಂದಂತೆ ಹೊಡೆದಾಗ ಅಲ್ಲೇ ಇದ್ದ ವ್ಯಕ್ತಿಯೊಬ್ಬ ಒಮ್ಮೆ ತಡೆಯಲು ಯತ್ನಿಸಿದ್ದು, ಆದರೂ ಕೋಪದಿಂದ ಇದ್ದ ಮಹಿಳೆ ಆತನಿಗೆ ಹಲ್ಲೆ ಮಾಡೋದನ್ನು ನಿಲ್ಲಿಸಿಲ್ಲ.


ಹಣ ನೀಡದ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಮಂಜುನನ್ನು ಪ್ರಶ್ನಿಸಿದಾಗ ಆತ ಕಾರಣ ನೀಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆಗ ಗ್ರಾಮಸ್ಥರು ಆತನ ಮೇಲೆ ಹಲ್ಲೆ ಮಾಡಿದ್ದಾರೆ.


ಇದೀಗ ಹಣ ನೀಡದ ವಿಚಾರಕ್ಕೆ ಸಂಬಂಧಿಸಿ ನಡೆದ ಈ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರು ತರಹೇವಾರಿ ಕಾಮೆಂಟ್‌ಗಳನ್ನು ಹಾಕುತ್ತಿದ್ದಾರೆ.

Malnad Times

Recent Posts

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

6 hours ago

ಮತದಾನದಲ್ಲೂ ಶಿವಮೊಗ್ಗ ಎತ್ತರಕ್ಕೇರಲಿ ; ಸ್ನೇಹಲ್ ಸುಧಾಕರ್ ಲೋಖಂಡೆ

ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…

7 hours ago

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…

7 hours ago

ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…

8 hours ago

ಬಟಾಣಿಜಡ್ಡು ಗ್ರಾಮದಲ್ಲಿ ಭತ್ತದ ಬೆಳೆ ನಾಶಗೊಳಿಸಿದ ಕಾಡಾನೆಗಳು, ಆತಂಕದಲ್ಲಿ ರೈತರು

ರಿಪ್ಪನ್‌ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…

9 hours ago

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

13 hours ago