ತರೀಕೆರೆ: ಮೀನು ಹಿಡಿಯಲು ಹೋದಾಗ ಭಾರೀ ಗಾಳಿಗೆ ತೆಪ್ಪ ಮಗುಚಿ ಬಿದ್ದು ಓರ್ವ ಸಾವನ್ನಪ್ಪಿ, ಇಬ್ಬರು ಪಾರಾಗಿರುವ ಘಟನೆ ತಾಲೂಕಿನ ಲಕ್ಕವಳ್ಳಿ ಗ್ರಾಮದ ಭದ್ರಾ ಜಲಾಶಯದಲ್ಲಿ ನಡೆದಿದೆ.
ಮೃತನನ್ನು 40 ವರ್ಷದ ಕೃಷ್ಣ ಎಂದು ಗುರುತಿಸಲಾಗಿದೆ. ಭದ್ರಾ ಜಲಾಶಯದಲ್ಲಿ ಕೃಷ್ಣ, ಅಜಯ್ ಹಾಗೂ ರಾಜೇಶ್ ಮೀನು ಹಿಡಿಯಲು ಹೋಗಿದ್ದರು. ಈ ವೇಳೆ ಬೀಸಿದ ಭಾರೀ ಗಾಳಿಯಿಂದ ಉಕ್ಕಡ ಮಗುಚಿ ಬಿದ್ದಿದೆ. ಉಕ್ಕಡ ಮಗುಚಿ ಬೀಳುತ್ತಿದ್ದಂತೆ ಅಜಯ್ ಹಾಗೂ ರಾಜೇಶ್ ಈಜಿ ದಡ ಸೇರಿದ್ದಾರೆ. ಆದರೆ, ಕೃಷ್ಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ನೀರಿನಲ್ಲಿ ಮುಳುಗುತ್ತಿದ್ದ ಕೃಷ್ಣನನ್ನ ಬದುಕಿಸಲು ರಾಜೇಶ್ ಹಾಗೂ ಅಜಯ್ ಹೋರಾಡಿದ್ದಾರೆ. ಆದರೆ, ಭಾರೀ ಗಾಳಿಗೆ ನೀರಿನ ಅಲೆಗಳು ರಭಸವಾಗಿದ್ದ ಕಾರಣ ಆತನ್ನು ಬದುಕಿಸಲು ಸಾಧ್ಯವಾಗಿಲ್ಲ.
ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಕೃಷ್ಣ ಅವರ ಮೃತದೇಹವನ್ನು ಉಡುಪಿಯ ಮಲ್ಪೆ ಮೂಲದ ಈಜು ತಜ್ಞ ಈಶ್ವರ್ ಮಲ್ಪೆ ಹಾಗೂ ತಂಡದವರು ಹುಡುಕಿ ಹೊರ ತಂದಿದ್ದಾರೆ. ಮೃತ ಕೃಷ್ಣ ಮೂಲತಃ ತರೀಕೆರೆ ತಾಲೂಕಿನವನು. ಲಕ್ಕವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…
ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…
ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…
ರಿಪ್ಪನ್ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…
ರಿಪ್ಪನ್ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…
ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…