ತರೀಕೆರೆ: ಬೈಕ್ನಲ್ಲಿ ಸಹ ಸವಾರರಾಗಿ ಸಂಚರಿಸುತ್ತಿದ್ದ ವೇಳೆ ಮಹಿಳೆಯೊಬ್ಬರ ಸೀರೆ ಜೊತೆ ಕಾಲು ಕೂಡಾ ಬೈಕಿನ ಚಕ್ರಕ್ಕೆ ಸಿಲುಕಿದ ಘಟನೆ ಪಟ್ಟಣದಲ್ಲಿ ನಡೆದಿದೆ.
ಕಾಲನ್ನು ಚಕ್ರದೆಡೆಯಿಂದ ಬಿಡಿಸಲಾಗದ ಮಹಿಳೆ ಗಂಟೆಗಳ ಕಾಲ ನೋವಿನಿಂದ ನರಳಾಡಿದರು.
ಇಟ್ಟಿಗೆ ಗ್ರಾಮದ ಯಶೋಧ ಬಾಯಿ ಈ ರೀತಿ ಸಂಕಷ್ಟಕ್ಕೊಳಗಾದ ಮಹಿಳೆ. ಇವರು ಬೈಕಿನಲ್ಲಿ ಸಹ ಸವಾರೆಯಾಗಿ ಸಂಚರಿಸುತ್ತಿದ್ದ ವೇಳೆ ಉಟ್ಟಿದ್ದ ಸೀರೆ ಅವರಿಗೆ ಅರಿವಿಲ್ಲದೆಯೇ ಬೈಕ್ ಚಕ್ರಕ್ಕೆ ಸಿಲುಕಿದೆ. ಸೀರೆಯನ್ನು ಬೈಕ್ ಸೆಳೆದ ರಭಸಕ್ಕೆ ಯಶೋಧ ಅವರ ಕಾಲು ಕೂಡಾ ಚಕ್ರದೆಡೆಗೆ ಸಿಲುಕಿಕೊಂಡಿತ್ತು. ಈ ವೇಳೆ ಬೈಕ್ ರಸ್ತೆಯಲ್ಲೇ ಉರುಳಿಬಿದ್ದಿದೆ.
ಆದರೆ ಮಹಿಳೆಯ ಕಾಲನ್ನು ಸುಲಭದಲ್ಲಿ ಚಕ್ರದೆಡೆಯಿಂದ ಹೊರ ತೆಗೆಯಲು ಆಗಿಲಿಲ್ಲ. ಇದರಿಂದ ಕೆಲ ತಾಸು ಮಹಿಳೆ ನೋವಿನಿಂದ ನರಳಾಡುವಂತಾಗಿತ್ತು. ಬಳಿಕ ಮ್ಯೆಕಾನಿಕ್ ಅನ್ನು ಕರೆಸಿ ಬೈಕಿನ ಚೈನ್ ಅನ್ನು ತುಂಡರಿಸಿ ಮಹಿಳೆಯನ್ನು ರಕ್ಷಿಸಲಾಯಿತು. ಕಾಲಿಗೆ ತೀವ್ರ ತರಹದ ಗಾಯಗಳಾಗಿವೆ.
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…
ರಿಪ್ಪನ್ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…
ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…
ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…