ಆಸ್ತಿ ಅಂತಸ್ತು ಗಳಿಕೆಗಿಂತಲೂ ಆರೋಗ್ಯಕ್ಕೆ ಮಹತ್ವ ನೀಡಿ ; ಮೂಲೆಗದ್ದೆ ಶ್ರೀಗಳು

Written by Mahesh Hindlemane

Published on:

ಹೊಸನಗರ ; ಆಸ್ತಿ ಅಂತಸ್ತು ಗಳಿಕೆಗಿಂತಲೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಾವಶ್ಯಕವಾಗಿದೆ ಎಂದು ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now

ಇಲ್ಲಿನ ಸಂತ ಅಂತೋಣಿ ದೇವಾಲಯದಲ್ಲಿ ಭಾನುವಾರ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ ಹಾಗೂ ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಆಶ್ರಯದಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ಹೊಲಿಗೆ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಇಂದು ಯಾಂತ್ರಿಕ ಯುಗ. ಮನುಷ್ಯ ಹಣ ಗಳಿಕೆಯನ್ನೇ ಪ್ರಧಾನ ಗುರಿಯಾಗಿಸಿಕೊಂಡು ಸ್ಪರ್ಧೆಗಳಿದಿದ್ದಾನೆ. ಆದರೆ ನೆಮ್ಮದಿ ಆರೋಗ್ಯ ದೂರವಾಗುತ್ತಿದೆ. ಭವಿಷ್ಯದಲ್ಲಿ ಇದು ಗಂಭೀರ ಸಮಸ್ಯೆಯಾಗಲಿದೆ. ತೀವ್ರ ಒತ್ತಡ, ಧಾವಂತದ ಜೀವನ ಎಂದಿಗೂ ಒಳ್ಳೆಯದಲ್ಲ. ಮನೋದೈಹಿಕ ಸದೃಡತೆ ಸಾಧಿಸಲು, ಉತ್ತಮ ಆಹಾರ, ವ್ಯಾಯಾಮ, ಉತ್ತಮ ಜೀವನಶೈಲಿಯಿಂದ ಮಾತ್ರ ಸಾದ್ಯ ಜಂಕ್‌ಫುಡ್, ನಿದ್ರಾಹಾರಗಳಲ್ಲಿ ಶಿಸ್ತು ಇಲ್ಲದ ಕಾರಣದಿಂದಾಗಿಯೇ ಇಂದು ಎಳೆಯ ವಯಸ್ಸಿನಲ್ಲಿಯೇ ಗಂಭೀರ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ ಎಂದರು.

ಎಸ್‌ಎಂಎಸ್‌ಎಸ್‌ಎಸ್ ಸಂಸ್ಥೆಯ ನಿರ್ದೇಶಕ ಫಾದರ್ ಪಿಯುಸ್ ಡಿಸೋಜ ಮಾತನಾಡಿ, ಸಂಸ್ಥೆಯು ಕಳೆದ 35 ವರ್ಷಗಳಿಂದ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಕೊಂಡಿದೆ. ಆರೋಗ್ಯ ಸಮಸ್ಯೆಗಳು ಕಂಡು ಬಂದಾಗ ಗುಣಮಟ್ಟದ ಸೌಲಭ್ಯಗಳು ಸಿಗಬೇಕು ಎನ್ನುವುದು ನಮ್ಮ ಧ್ಯೇಯವಾಗಿದೆ. ಜನಪರ ಸೇವೆ ನೀಡುವ ಉದ್ದೇಶದಿಂದ ನಮ್ಮ ಕಾರ್ಯಕ್ಷೇತ್ರ ವ್ಯಾಪ್ತಿಯಲ್ಲಿ ನಿರಂತರವಾಗಿ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಸ್ವಉದ್ಯೋಗ ತರಬೇತಿಗಳನ್ನು ನೀಡಲಾಗುತ್ತಿದೆ ಎಂದರು.

ಸಂತ ಅಂತೋನಿ ದೇವಾಲಯದ ಫಾದರ್ ಸೈಮನ್ ಹೋರ್ಟಾ, ವೈದ್ಯೆ ಡಾ.ವಿಸ್ಮಯ, ಶಶಿಕಲಾ ಹರೀಶ್, ಎಸ್‌ಎಂಎಸ್‌ಎಸ್‌ಎಸ್ ಸಂಸ್ಥೆಯ ಮಧುಸೂದರ್, ಜ್ಯೋತಿ, ನಳಿನಿ, ಅಂಬಿಕ, ಚೈತ್ರ ಮತ್ತಿತರರು ಇದ್ದರು.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment