MUDIGERE ; ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸುಮಾರು 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಂಕಸಾಲೆ ಬಳಿ ಶನಿವಾರ ಬೆಳಗಿನಜಾವ ನಡೆದಿದೆ.

ಬೆಂಗಳೂರಿನಿಂದ ಹೊರನಾಡಿಗೆ ಕಾರಿನಲ್ಲಿ ಹೋಗುತ್ತಿದ್ದ ಪ್ರವಾಸಿಗರು ಮೂಡಿಗೆರೆ ತಾಲೂಕಿನ ಸುಂಕಸಾಲೆ ಬಳಿ ತಿರುವಿನಲ್ಲಿ ದಟ್ಟ ಮಂಜಿನಿಂದ ರಸ್ತೆ ಕಾಣದೆ ನಿಯಂತ್ರಣ ಕಳೆದುಕೊಂಡು 30 ಅಡಿ ಆಳದಲ್ಲಿದ್ದ ಪಂಚಾಯತ್ ಅಂಗಳಕ್ಕೆ ಬಿದ್ದಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನಲಾಗಿದ್ದು. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
ಲೇಖನವನ್ನು ಮುಂದುವರಿಸಿ ಓದಿ
ಈ ಘಟನೆ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

