ಹೊತ್ತಿ ಉರಿದ ಚಲಿಸುತ್ತಿದ್ದ ಸರ್ಕಾರಿ ಬಸ್ !

Written by malnadtimes.com

Published on:

SAGARA | ಚಲಿಸುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಜೋಗ ರಸ್ತೆಯ ಕೆ.ಎಸ್.ಆರ್.ಟಿ‌‌‌.ಸಿ ಡಿಪೋ ಬಳಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಭಟ್ಕಳದಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ಇದಾಗಿದ್ದು ಅದೃಷ್ಟವಶಾತ್‌ ಭಾರೀ ಅನಾವುತವೊಂದು ತಪ್ಪಿದೆ.

ಕೆಲವೇ ಕ್ಷಣದಲ್ಲಿ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಹೊತ್ತಿ ಉರಿದಿದ್ದು ಅದೃಷ್ಟವಶಾತ್ ಬಸ್‌ನಲ್ಲಿದ್ದ 12 ಜನ ಪ್ರಯಾಣಿಕರು ಪಾರಾಗಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ‌.

Leave a Comment