ರಿಪ್ಪನ್ಪೇಟೆ ; ಕಳೆದ ಐದಾರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಕೋಡು-ಗವಟೂರು ಸಂಪರ್ಕ ರಸ್ತೆ ಸಂಪೂರ್ಣ ಕೆಸರು ಗದ್ದೆಯಂತಾಗಿ ಸಾರ್ವಜನಿಕರು, ಶಾಲಾ-ಕಾಲೇಜ್ ವಿದ್ಯಾರ್ಥಿಗಳು ಓಡಾಡದಂತಾಗಿದ್ದು ಸಾಕಷ್ಟು ಬಾರಿ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಪ್ರಯೋಜವಾಗದ ಕಾರಣ ಗ್ರಾಮಸ್ಥರೇ ದುರಸ್ತಿಯಲ್ಲಿ ತೊಡಗುವಂತಾಗಿದೆ.
ನಿತ್ಯ ಸುಮಾರು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಓಡಾಡುವ ಮುಖ್ಯ ಸಂಪರ್ಕ ರಸ್ತೆಯಾಗಿದ್ದು ಅನಾರೋಗ್ಯ ಪೀಡಿತರು ಮತ್ತು ಗರ್ಭೀಣಿಯರು ಮತ್ತು ಶಾಲಾ-ಕಾಲೇಜ್ ವಿದ್ಯಾರ್ಥಿಗಳು ರಿಪ್ಪನ್ಪೇಟೆಗೆ ಬಂದು ಹೋಗುವ ಪ್ರಮುಖ ರಸ್ತೆ ಇದಾಗಿದ್ದು ಸಂಪೂರ್ಣ ಕೆಸರು ಗದ್ದೆಯಂತಾಗಿ ಯಾವುದೇ ವಾಹನಗಳು ಸಂಚರಿಸದ ಸ್ಥಿತಿ ನಿರ್ಮಾಣವಾಗಿದೆ.
ಗೋಲ್ಡನ್ ಸಿಟಿ ಲೇಔಟ್ ಅವೈಜ್ಞಾನಿಕ ನಿರ್ಮಾಣದಲ್ಲಿ ನಿರ್ಮಿಸಲಾಗಿರುವ ರಸ್ತೆ ಮತ್ತು ಬಾಕ್ಸ್ ಚರಂಡಿ ಮೂಲಕ ನೀರು ಹರಿದು ಈ ರಸ್ತೆಗೆ ನುಗ್ಗುವ ಪರಿಣಾಮದಿಂದಾಗಿ ಈ ರೀತಿ ಹಾಳಾಗಲು ಕಾರಣವೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ಈ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಬಂದರೆ ಯಮಲೋಕ ಸೇರುವುದು ಗ್ಯಾರಂಟಿಯಾಗಿದೆ. ಇನ್ನಾದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಇತ್ತ ಗಮನಹರಿಸಿ ತಕ್ಷಣ ಈ ಹಳಿಯೂರು-ಬೆಳಕೋಡು-ಗವಟೂರು ಸಂಪರ್ಕ ರಸ್ತೆ ದುರಸ್ಥಿ ಮಾಡುವರೇ ಕಾದು ನೋಡಬೇಕಾಗಿದೆ.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteMay 28, 2025ರಿಪ್ಪನ್ಪೇಟೆ ; ಈ ಗ್ರಾ.ಪಂ. ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ಇರಲ್ಲ !
RipponpeteMay 27, 2025ಕೆಸರು ಗದ್ದೆಯಂತಾದ ಹಳಿಯೂರು-ಬೆಳಕೋಡು ಸಂಪರ್ಕ ರಸ್ತೆ !
RipponpeteMay 27, 2025ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಆರ್ಯನ್
ChikkamagaluruMay 27, 2025ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?